2:31 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪ್ರತಿ ದಿನವೂ ಮಕ್ಕಳ ದಿನವೇ: ಚಿಣ್ಣರ ಕಲರವ ಎಲ್ಲೆಡೆ ಕೇಳುತ್ತಿರಲಿಲ್ಲ

14/11/2021, 09:38

ಮಕ್ಕಳಿರಲಿ ಮನೆ ತುಂಬಾ… ಹರಡುತ್ತಿರಲಿ ನಗು ಹೃದಯ ತುಂಬಾ.. 

ಮನೆ ತುಂಬಾ ಓಡಾಡುವ ಮಕ್ಕಳ ಕಿಲ ಕಿಲ ನಗುವಿನ ಶಬ್ದ , ಆಗಾಗ ಕಿವಿಗೆ ಅಪ್ಪಳಿಸುವಂತೆ ಕೇಳುವ ಕಿರುಚಾಟ ,ಕೂಗಾಟ, ಮುದ್ದುಮುದ್ದು ಮಾತುಗಳನ್ನು ಕೇಳುವಾಗ ಆಗುವಂತಹ ಸಂತೋಷ ಹೇಳಲು ಅಸಾಧ್ಯ.


ಮಗುವಿನ ಸುಂದರ ಮೊಗ ನೋಡುವಾಗ ಮನಸ್ಸಿಗೆ ಆಗುವಂತಹ ಆನಂದ ವರ್ಣಿಸಲಸದಳ.. 


ಇಂತಹ ಮುದ್ದು ಮನಸಿನ ಮಗು ಮನೆಬಿಟ್ಟು ಶಾಲೆಗೆ ಸೇರಿದ ನಂತರ ಶಾಲೆಯಲ್ಲಿ  ಪಡೆಯುವ ಶಿಕ್ಷಣವು ಮಗುವಿನ ಜೀವನ ಗತಿಯನ್ನೇ ಬದಲಾಯಿಸುತ್ತದೆ.

ಶಾಲೆಯಲ್ಲಿ ಗೆಳೆಯರೊಂದಿಗೆ ಸೇರಿ ಸಹಕಾರ , ಸಹನೆ , ಸಹೋದರತೆ, ಶಿಕ್ಷಕರೊಂದಿಗೆ ಗುರು ಹಿರಿಯರೊಂದಿಗೆ ಗೌರವದಿಂದ ವರ್ತಿಸುವ ವಿಧಾನ ಎಲ್ಲವನ್ನೂ ಶಿಕ್ಷಣದಿಂದ ಕಲಿಯುತ್ತಾರೆ.

ನವೆಂಬರ್ 14 ಬಂತೆಂದರೆ ಮಕ್ಕಳ ಮನದಲ್ಲಿ ಸಂಭ್ರಮ ಮನೆ ಮಾಡುತ್ತದೆ. ಶಿಕ್ಷಕರು ತರಗತಿಗೆ ಹೋಗುವಾಗ ತಮ್ಮ ಮನದಿಂಗಿತವನ್ನು , ಆಶಯವನ್ನು ವ್ಯಕ್ತಪಡಿಸುತ್ತಾರೆ. ಮಕ್ಕಳ ದಿನಾಚರಣೆ ಆಚರಿಸುವ ಬಗ್ಗೆ ಕೇಳುತ್ತಾರೆ. ಮಕ್ಕಳ ದಿನಾಚರಣೆಯಂದು ಇಡೀ ದಿನ ಸಂತೋಷದಿಂದ ಕಳೆಯುತ್ತಾರೆ. ಆ ದಿನ ಮಕ್ಕಳ ಹಬ್ಬ , ಚಿಣ್ಣರ ಚಿಲಿಪಿಲಿ ಹೊಸ ಬಟ್ಟೆ ಹಾಕಿಕೊಂಡು  ಶಾಲೆಗೆ ಬರುವ ಸಂಭ್ರಮದ ಗುಂಗಿನಲ್ಲಿರುತ್ತಾರೆ ,

ಶಾಲೆಯಲ್ಲಿ ಆಟೋಟ ಸ್ಪರ್ಧೆಗಳು ಹಾಡು , ನೃತ್ಯ ಮಾಡುವುದರಿಂದ  ಬಹುಮಾನ ಪಡೆಯುವ ಮೂಲಕ ಸಂಭ್ರಮಿಸುತ್ತಾರೆ. ಎಲ್ಲರೊಂದಿಗೆ ಖುಷಿಯಿಂದ ಬೆರೆತು ಕಲಿತು ಸಂಭ್ರಮವನ್ನು ಆಚರಿಸುತ್ತಾರೆ.. ಈ ಸಂಭ್ರಮ ಕೇವಲ ಮಕ್ಕಳ ದಿನಾಚರಣೆಯಂದು ಮಾತ್ರ ಇರದೆ ಪ್ರತಿದಿನವೂ ಪ್ರತಿಕ್ಷಣವು ಇರಲಿ ಎಂಬುದೇ ನಮ್ಮ ಆಶಯ.

✍️

ಇತ್ತೀಚಿನ ಸುದ್ದಿ

ಜಾಹೀರಾತು