11:54 PM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯೊಳಗೆ ಹಗ್ಗಜಗ್ಗಾಟ: ಬಿಎಸ್ ವೈ ಟೀಮಿಗಾಗುತ್ತಾ ಹಿನ್ನಡೆ? ಯತ್ನಾಳ್ ಗೆ ಸಿಗುತ್ತಾ ಚಾನ್ಸ್?

12/06/2023, 14:08

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಸಾಮಾನ್ಯವಾಗಿ ಮುಖ್ಯಮಂತ್ರಿ ಆಯ್ಕೆಯಾದ ಬೆನ್ನಲ್ಲೇ ಪ್ರತಿಪಕ್ಷದ ನಾಯಕನ ಆಯ್ಕೆ ನಡೆಯುತ್ತದೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಬಿದ್ದ ಏಟಿನಿಂದ ಇನ್ನೂ ಚೇತರಿಸಿಕೊಳ್ಳದ ಬಿಜೆಪಿಯು ಫಲಿತಾಂಶ ಹೊರಬಿದ್ದು ಹೆಚ್ಚುಕಡಿಮೆ ತಿಂಗಳಾಗುತ್ರಾ ಬಂದರೂ ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಸೋತಿದೆ. ಪಕ್ಷದ ನಾಯಕರೊಳಗೆ ಮೂಡದ ಒಮ್ಮತ ಇದಕ್ಕೆ ಕಾರಣವಾಗಿದೆ.
ಬಿಜೆಪಿ ನಾಯಕರು ಎಷ್ಟೇ ಹೇಳಿದರೂ ಪಕ್ಷದೊಳಗೆ ಎರಡು ಬಣಗಳು ಸಕ್ರೀಯವಾಗಿವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೇ ಈ ಎರಡು ಟೀಮ್ ಗಳ ನಾಯಕರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಕೆಲವು ಹಿರಿಯ ನಾಯಕರು ಯಡಿಯೂರಪ್ಪ ಬಣದಲ್ಲಿ ಸಕ್ರೀಯರಾಗಿದ್ದಾರೆ. ಹಾಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಸನಗೌಡ ಪಾಟೀಲ್ ಯತ್ನಾಳ್ ಮುಂತಾದವರು ಸಂತೋಷ್ ಬಣದಲ್ಲಿ ಕ್ರಿಯಾಶೀಲರಾಗಿದ್ದಾರೆ.
ಈ ಬಣ ರಾಜಕೀಯವೇ ಬಿಜೆಪಿ ಆತ್ಮಾವಲೋಕನ ಸಭೆಯಲ್ಲಿಯೂ ವಿಭಿನ್ನ ಅಭಿಪ್ರಾಯಗಳು ಹೊರಬರಲು ಕಾರಣವಾಗಿದೆ.
ಯಡಿಯೂರಪ್ಪ ಅವರು ಅನಿವಾರ್ಯ ಸ್ಥಿತಿಯಲ್ಲಿ ಅಧಿಕಾರದಿಂದ ಕೆಳಗಿಳಿದಾಗ ತನ್ನ ಖಾಸಾ ಶಿಷ್ಯ ಬಸವರಾಜ ಬೊಮ್ಮಾಯಿ ಅವರನ್ನು ನಿರಾಯಸವಾಗಿ ಸಿಎಂ ಕುರ್ಚಿಯಲ್ಲಿ ಕೂರಿಸಿ ನಿರ್ಗಮಿಸಿದ್ದರು. ಈಗಲೂ ಕೂಡ ಯಡಿಯೂರಪ್ಪ ಅವರು ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಬೊಮ್ಮಾಯಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ಪ್ರತಿಪಕ್ಷದ ನಾಯಕನಾಗಿ ಸರಕಾರವನ್ನು ಎಲ್ಲಿ ಕಟ್ಟಿಹಾಕಬೇಕೆನ್ನುವ ಬಗ್ಗೆ ನೈಪುಣ್ಯತೆ ಹೊಂದಿದ್ದಾರೆ ಎಂದು ಯಡಿಯೂರಪ್ಪ ಅವರು ಹೈಕಮಾಂಡಿನ ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಸಂತೋಷ್ ಅವರ ಗುಂಪು ಯಡಿಯೂರಪ್ಪ ಅವರ ಅಭ್ಯರ್ಥಿಯನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿ ಪ್ರತಿಪಕ್ಷದ ನಾಯಕ ಸ್ಥಾನದಲ್ಲಿ ಕೂರಿಸಲು ತಯಾರಿಲ್ಲ. ಬದಲಿಗೆ ಸಂತೋಷ್ ಅವರು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ. ಯತ್ನಾಳ್ ಅವರು ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದವರು. ಅವರಿಗೂ ಆಡಳಿತಾತ್ಮಕ ಒಳ್ಳೆಯ ಅನುಭವವಿದೆ. ಜವಾಬ್ದಾರಿ ಬಂದಾಗ ಅವರು ವಿವಾದಾತ್ಮಕ ಹೇಳಿಕೆ ಕೊಡಲು ಹೋಗಲಾರರು. ಅಟಲ್ ಬಿಹಾರಿ ವಾಜಪೇಯಿ ಸರಕಾರದಲ್ಲಿ ರೈಲ್ವೆ ಸಚಿವರಾಗಿದ್ದಾಗ ಅವರು ತೂಕದ ಹೇಳಿಕೆಗಳನ್ನೇ ನೀಡುತ್ತಿದ್ದರು. ಪ್ರತಿಪಕ್ಷದ ನಾಯಕ ಸ್ಥಾನ ದೊರೆತರೆ ಅವರು ಜವಾಬ್ದಾರಿ ಯುತವಾಗಿ ನಡೆದುಕೊಳ್ಳುತ್ತಾರೆ. ಅದಲ್ಲದೆ ಲಿಂಗಾಯತ ಸಮುದಾಯಕ್ಕೆ ಸೇರಿದವರು ಎಂದು ಸಂತೋಷ್ ಅವರು ಬಿಜೆಪಿ ಹೈಕಮಾಂಡಿಗೆ ವರದಿ ಕಳುಹಿಸಿದ್ದಾರೆ ಎನ್ಬಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಡಿದ
ಕೆಲವು ಹೊಸ ಪ್ರಯೋಗಗಳನ್ನು ಕೂಡ ಸಂತೋಷ್ ಸಮರ್ಥಿಸಿಕೊಂಡಿದ್ದಾರೆ. ಹೊಸ ಪ್ರಯೋಗ
ಬಿಜೆಪಿಗೆ ಅನಿವಾರ್ಯವಾಗಿತ್ತು. ಈ ಪ್ರಯೋಗದಿಂದ 60+ ಸ್ಥಾನಗಳಾದರೂ ಬಿಜೆಪಿಗೆ ಬಂದಿದೆ. ಇಲ್ಲದಿದ್ದರೆ ಅಷ್ಟೂ ಬರುತ್ತಿರಲಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ. ಒಟ್ಟಿನಲ್ಲಿ
ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಯಡಿಯೂರಪ್ಪ ಅವರಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಎಲ್ಲ ಲೆಕ್ಕಾಚಾರದ ಪ್ರಕಾರ ಪ್ರತಿಪಕ್ಷದ ನಾಯಕ ಸ್ಥಾನ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಿಗುವ ಸಾಧ್ಯತೆ ಹೆಚ್ಚಿದೆ.

ಇತ್ತೀಚಿನ ಸುದ್ದಿ

ಜಾಹೀರಾತು