12:52 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಪ್ರತಿಪಕ್ಷ ಉಪ ನಾಯಕ ಖಾದರ್ ಗೆ ನಕಲಿ ಹೆಸರಲ್ಲಿ ಕರೆ, ಸಂದೇಶ: ಪೊಲೀಸ್ ಕಮಿಷನರ್ ಗೆ ದೂರು

02/01/2023, 23:19

ಮಂಗಳೂರು(reporterkarnataka.com): ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರ ಮೊಬೈಲ್ ಗೆ ನಕಲಿ ಕರೆ ಹಾಗೂ ಸಂದೇಶ ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಖಾದರ್ ಅವರು ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.


ಮಧ್ಯಾಹ್ನ 1.33ರ ಸುಮಾರಿಗೆ 7996664000 ಸಂಖ್ಯೆಯ ಮೊಬೈಲ್‌ನಿಂದ ಎರಡು ಬಾರಿ ನನಗೆ ಕರೆ ಬಂದಿತ್ತು, ಆದರೆ ನಾನು ಸಮಾರಂಭದಲ್ಲಿ ಇದ್ದಿರುವುದರಿಂದ ಕರೆ ಸ್ವೀಕರಿಸಿರಲಿಲ್ಲ. ಬಳಿಕ ಸಭೆ ಮುಗಿಸಿ ಮೊಬೈಲ್ ನೋಡಿದಾಗ ಇದರಲ್ಲಿ ಅದರಲ್ಲಿ ಕಾಲ್ ಮಿ ಎಂದು ಬರೆದಿತ್ತು. ಈ ಮೊಬೈಲ್ ಸಂಖ್ಯೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಹೆಸರಿನಲ್ಲಿ ಸೇವ್ ಮಾಡಲಾಗಿತ್ತು ಎಂದು ಟ್ರೂ ಕಾಲರ್‌ನಲ್ಲಿ ತಿಳಿದಿದೆ. ಈ ಬಗ್ಗೆ ಕಾಲ್ ಮಾಡಿದವರು ಯಾರು ಮತ್ತು ಯಾಕಾಗಿ ಮಾಡಿದರು ಎಂದು ತಿಳಿಯಲು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಖಾದರ್ ಅವರು ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು