2:17 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಪ್ರತಿ ಶಾಲೆ ಶಾಲೆಗಳಲ್ಲಿಯೂ ಕನ್ನಡದ ಕಂಪು ಹರಡಬೇಕು: ಕಸಾಪ ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್

19/07/2023, 10:42

ಮಂಗಳೂರು(reporterkarnataka.com): ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ ಎಂದು ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಹೇಳಿದರು.
ನಗರದ ಬೆಂಗ್ರೆ ಸ್ಯಾಂಡ್ಸ್ ಪಿಟ್ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡ ಕವನ ಗಾಯನ ಸ್ಪರ್ಧೆಯಲ್ಲಿ ನಿರ್ಣಾಯಕ ಹಾಗೂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕನ್ನಡ ಭಾವಗೀತೆಗಳನ್ನು ಹಾಡುವ ಮಕ್ಕಳ ಉತ್ಸಾಹವನ್ನು ಕೊಂಡಾಡಿದ ಅವರು , ಅಧ್ಯಯನ, ಪ್ರತಿಭೆ ಮತ್ತು ಹವ್ಯಾಸಗಳ ಮೂಲಕ ಜೀವನದಲ್ಲಿ ಯಶಸ್ಸು ಗಳಿಸುವ ದಾರಿಯನ್ನು ತಿಳಿಸಿಕೊಟ್ಟರು.
ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಕೇಶ್ ವಿ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಗೀತ ಗಾಯನ ಸ್ಪರ್ಧೆ 7ನೇ ತರಗತಿ ವಿಭಾಗದಲ್ಲಿ ನವ್ಯ ( ಪ್ರಥಮ ) ಗಂಗಮ್ಮ ( ದ್ವಿತೀಯ ) ಗೌತಮ್ ( ತೃತೀಯ ) , 6 ನೇ ತರಗತಿ ವಿಭಾಗದಲ್ಲಿ ಹವಿಶ ( ಪ್ರಥಮ ) ದಿಯಾ ( ದ್ವಿತೀಯ ) ಅನುಷ್ಕಾ ( ತೃತೀಯ ) ಹಾಗೂ 1ರಿಂದ 4 ನೆಯ ತರಗತಿ ವಿಭಾಗದಲ್ಲಿ ಡಿಂಪಲ್ ( ಪ್ರಥಮ ) ನಿಹಾರಿಕಾ ( ದ್ವಿತೀಯ ) ತನು ( ತೃತೀಯ ) ಬಹುಮಾನ ಪಡೆದರು.ತಾಲೂಕು ಘಟಕದ ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ವಿದ್ಯಾರ್ಥಿಗಳ ಗಾಯನದ ಬಗ್ಗೆ ಹರ್ಷ ವ್ಯಕ್ತ ಪಡಿಸುತ್ತಾ ಉಪಯುಕ್ತ ಸಲಹೆಗಳನ್ನು ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಉಮಾಲಕ್ಷ್ಮೀ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಇನ್ನಷ್ಟು ಇಂತಹ ಕಾರ್ಯಕ್ರಮಗಳಾಗಲಿ ಎಂದು ಹಾರೈಸಿದರು.
ಶಿಕ್ಷಕಿ ಸುಮಾ ಕಾರ್ಯಕ್ರಮ ನಿರೂಪಿಸಿದರು. ಬೋಧಕ ವರ್ಗದ ಉಷಾ ಕೆ , ಅಶ್ವಿನಿ , ಶೀತಲ್ , ದೀಪಾ ಉಪಸ್ಥಿತರಿದ್ದು ಸಹಕರಿಸಿದರು. ಸುಮಾರು 80 ವಿದ್ಯಾರ್ಥಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು