1:23 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪ್ರತಿ ಶಾಲೆ ಶಾಲೆಗಳಲ್ಲಿಯೂ ಕನ್ನಡದ ಕಂಪು ಹರಡಬೇಕು: ಕಸಾಪ ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್

19/07/2023, 10:42

ಮಂಗಳೂರು(reporterkarnataka.com): ಪ್ರತಿ ಶಾಲೆಯಲ್ಲಿಯೂ ಕನ್ನಡದ ಕಂಪನ್ನು ಹರಡುವ ಪ್ರಯತ್ನದಲ್ಲಿ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕ ತೊಡಗಿಕೊಳ್ಳಲಿದೆ ಎಂದು ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಎಸ್. ರೇವಣ್ಕರ್ ಹೇಳಿದರು.
ನಗರದ ಬೆಂಗ್ರೆ ಸ್ಯಾಂಡ್ಸ್ ಪಿಟ್ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡ ಕವನ ಗಾಯನ ಸ್ಪರ್ಧೆಯಲ್ಲಿ ನಿರ್ಣಾಯಕ ಹಾಗೂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕನ್ನಡ ಭಾವಗೀತೆಗಳನ್ನು ಹಾಡುವ ಮಕ್ಕಳ ಉತ್ಸಾಹವನ್ನು ಕೊಂಡಾಡಿದ ಅವರು , ಅಧ್ಯಯನ, ಪ್ರತಿಭೆ ಮತ್ತು ಹವ್ಯಾಸಗಳ ಮೂಲಕ ಜೀವನದಲ್ಲಿ ಯಶಸ್ಸು ಗಳಿಸುವ ದಾರಿಯನ್ನು ತಿಳಿಸಿಕೊಟ್ಟರು.
ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಕೇಶ್ ವಿ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಗೀತ ಗಾಯನ ಸ್ಪರ್ಧೆ 7ನೇ ತರಗತಿ ವಿಭಾಗದಲ್ಲಿ ನವ್ಯ ( ಪ್ರಥಮ ) ಗಂಗಮ್ಮ ( ದ್ವಿತೀಯ ) ಗೌತಮ್ ( ತೃತೀಯ ) , 6 ನೇ ತರಗತಿ ವಿಭಾಗದಲ್ಲಿ ಹವಿಶ ( ಪ್ರಥಮ ) ದಿಯಾ ( ದ್ವಿತೀಯ ) ಅನುಷ್ಕಾ ( ತೃತೀಯ ) ಹಾಗೂ 1ರಿಂದ 4 ನೆಯ ತರಗತಿ ವಿಭಾಗದಲ್ಲಿ ಡಿಂಪಲ್ ( ಪ್ರಥಮ ) ನಿಹಾರಿಕಾ ( ದ್ವಿತೀಯ ) ತನು ( ತೃತೀಯ ) ಬಹುಮಾನ ಪಡೆದರು.ತಾಲೂಕು ಘಟಕದ ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ವಿದ್ಯಾರ್ಥಿಗಳ ಗಾಯನದ ಬಗ್ಗೆ ಹರ್ಷ ವ್ಯಕ್ತ ಪಡಿಸುತ್ತಾ ಉಪಯುಕ್ತ ಸಲಹೆಗಳನ್ನು ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಉಮಾಲಕ್ಷ್ಮೀ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಇನ್ನಷ್ಟು ಇಂತಹ ಕಾರ್ಯಕ್ರಮಗಳಾಗಲಿ ಎಂದು ಹಾರೈಸಿದರು.
ಶಿಕ್ಷಕಿ ಸುಮಾ ಕಾರ್ಯಕ್ರಮ ನಿರೂಪಿಸಿದರು. ಬೋಧಕ ವರ್ಗದ ಉಷಾ ಕೆ , ಅಶ್ವಿನಿ , ಶೀತಲ್ , ದೀಪಾ ಉಪಸ್ಥಿತರಿದ್ದು ಸಹಕರಿಸಿದರು. ಸುಮಾರು 80 ವಿದ್ಯಾರ್ಥಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು