1:12 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಪ್ರತಿಯೊಬ್ಬರು ಧೃತಿಗೆಡದೆ ಆತ್ಮಸ್ಥೈರ್ಯದಿಂದ ಬದುಕು ಮುನ್ನಡೆಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಕರೆ

03/06/2021, 16:49

ನಾಗಮಂಗಲ(reporterkarnataka news): ಇಂದಿನ ಮಹಾಮಾರಿ ಕೊರೊನಾದಿಂದ ರಾಜ್ಯ ದೇಶ ಧೃತಿಗೆಟ್ಟಿದ್ದು, ಬದುಕುವ ಜೀವದ ಜೊತೆ ಇರಬೇಕು. ಯಾರು ಕೂಡ ಧೃತಿಗೆಡಬಾರದು ಎಂದು ಆದಿಚುಂಚನಗಿರಿಯ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮಿಗಳು ಕರೆ ನೀಡಿದರು.

ಅವರಿಂದ ನಾಗಮಂಗಲ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಿ ಆರ್ ಎಸ್ .ಫೌಂಡೇಶನ್ ಹಮ್ಮಿಕೊಂಡಿದ್ದ ತುರ್ತು ವಾಹನ ಹಾಗೂ ಪೌರಕಾರ್ಮಿಕರಿಗೆ ಆಶಾ ಕಾರ್ಯಕರ್ತರಿಗೆ ಆಹಾರಕ್ಕೆ ಕಿಟ್ ನೀಡುವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಇಂದು ದೇಶಾದ್ಯಂತ ಮಹಾಮಾರಿಯು ಹಬ್ಬಿರುವ ಹಿನ್ನೆಲೆಯಲ್ಲಿ ಬದುಕುವ ದಾರಿಯ ಹುಡುಕುತ್ತ ನಾವುಗಳು ಆತ್ಮಸ್ಥೈರ್ಯದಿಂದ ಧೃತಿಗೆಡದೆ ಧೈರ್ಯದಿಂದ ಜೀವ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕೆಂದು ತಿಳಿಸಿದರು.

ನಾವುಗಳು ಮೊದಲನೆಯ ಅಲೆಯಲ್ಲಿ ಅಲ್ಪ ಪ್ರಮಾಣದ ಬದುಕು ಎದುರಿಸುತ್ತಿದ್ದು ಎರಡನೇ ಅಲೆ ಇಂದು ದೇಶ ವ್ಯಾಪಿಸಿ ಬದುಕುವ ಸಂಕಷ್ಟದ ಹಾದಿಯಲ್ಲಿದೆ.ನಾವುಗಳು ಹೆದರದೆ ಆತ್ಮವಿಶ್ವಾಸದಿಂದ ಮುಂಬರುವ ದಿನಗಳಲ್ಲಿ ಸಾಮಾಜಿಕ ಅಂತರದೊಂದಿಗೆ  ಬದುಕಬೇಕಾದ ಸ್ಥಿತಿ  ನಿರ್ಮಾಣವಾಗಿದೆ. ಇಂತಹ  ಇಕ್ಕಟ್ಟಿನಲ್ಲಿ ನಾವುಗಳೆಲ್ಲರೂ ಎಚ್ಚರದಿಂದ  ಇರಬೇಕಾದ ಅಗತ್ಯ ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ಭಯಬೀತರಾಗದೆ ಆತ್ಮಹತ್ಯೆಯಂತಹ ಚಿಂತನೆಯನ್ನು ಕೈಬಿಟ್ಟು ಈ ರೋಗಮುಕ್ತ ಸಮಾಜವನ್ನು ನಿರ್ಮಾಣ ಮಾಡುವುದಕ್ಕೆ ಸಹಕರಿಸಬೇಕು. ಇದರ ಜೊತೆಗೆ ಬ್ಲಾಕ್ ಪಂಗಸ್ ರೋಗವು ಸಹ ಹರಡುತ್ತಿದ್ದು ಸಾರ್ವಜನಿಕರು ಆದಷ್ಟು ಸುರಕ್ಷಿತವಾಗಿ ಇರಬೇಕಾಗುತ್ತದೆ. ಈ ಕೊರೊನಾ ರೋಗವನ್ನು ನಿರ್ಮೂಲನ ಮಾಡಲು ಸರ್ಕಾರವು ಸಹ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಮುಂದಿನ ಹತ್ತು ದಿನಗಳಲ್ಲಿ ನಮ್ಮ ಆದಿಚುಂಚನಗಿರಿ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಪ್ಲಾಂಟನ್ನು ನಿರ್ಮಾಣ ಮಾಡುತ್ತಿದ್ದು ನಮ್ಮ ಆಸ್ಪತ್ರೆಯಲ್ಲಿ ಸಾವಿರ ರೋಗಿಗಳು ಬಂದರೂ ಸಹ ಚಿಕಿತ್ಸೆಯನ್ನು ನೀಡಲಾಗುವುದು. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಬೇಕು ಎಂದು ತಿಳಿಸಿದರು

ನಾಗಮಂಗಲದ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಅವರು, ಸಿ.ಆರ್.ಎಸ್ ಫೌಂಡೇಶನ್ ಸಮಾಜಮುಖಿ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು