1:03 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಪ್ರತಿಷ್ಠಿತ ಸಂದೇಶ ಪ್ರಶಸ್ತಿ ಫೆ. 22ರಂದು ಪ್ರದಾನ: ಸಾಹಿತಿ ಬರಗೂರು, ಡಾ. ಟಿ.ಸಿ. ಪೂರ್ಣಿಮಾ ಸಹಿತ 14 ಮಂದಿ ಆಯ್ಕೆ; ಪತ್ರಿಕೆ ಹಾಗೂ ಸಂಘಟನೆಗೂ ಪುರಸ್ಕಾರ

11/02/2022, 12:00

ಮಂಗಳೂರು(reporterkarnataka.com);

ಮಂಗಳೂರಿನ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು ಸಾಹಿತ್ಯ, ಶಿಕ್ಷಣ, ಮಾಧ್ಯಮ, ಕಲೆ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಘಟನೆಗಳಿಗೆ ನೀಡುವ ವಾರ್ಷಿಕ 2020-21 ಮತ್ತು 2021-22ನೇ ಸಾಲಿನ ರಾಜ್ಯ ಮಟ್ಟದ ಸಂದೇಶ ಪ್ರಶಸ್ತಿಗೆ ಸಾಧಕರು, ಒಂದು ಸಂಘಟನೆ ಮತ್ತು ಒಂದು ಪತ್ರಿಕೆಯನ್ನು ಆಯ್ಕೆ ಮಾಡಿದೆ.

ಸಂದೇಶ ಪ್ರತಿಷ್ಠಾನದ ವಿಶ್ವಸ್ಥ ರೊಯ್‌ ಕ್ಯಾಸ್ತಲಿನೊ ಪತ್ರಿಕಾಗೊಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಸಾಹಿತ್ಯ ಪ್ರಶಸ್ತಿ: ಕನ್ನಡ- ಬರಗೂರು ರಾಮಚಂದ್ರಪ್ಪ (ತುಮಕೂರು), ಕೊಂಕಣಿ- ಅಮರ್‌ ಕೊಂಕಣಿ (ಮಂಗಳೂರು ಸಂತ ಅಲೋಶಿಯಸ್‌ ಕಾಲೇಜಿನ ಕೊಂಕಣಿ ಸಂಸ್ಥೆ ವತಿಯಿಂದ ಆರಂಭವಾದ ಪತ್ರಿಕೆ), ತುಳು- ಡಾ. ಸುನಿತಾ ಎಂ. ಶೆಟ್ಟಿ (ದಕ್ಷಿಣ ಕನ್ನಡ), ಮಾಧ್ಯಮ ಪ್ರಶಸ್ತಿ- ನಾಗೇಶ ಹೆಗಡೆ (ಉತ್ತರ ಕನ್ನಡ), ಕೊಂಕಣಿ ಸಂಗೀತ ಪ್ರಶಸ್ತಿ-ಮೀನ ರೆಬಿಂಬಸ್‌ (ದ.ಕ.), ಕಲಾ ಪ್ರಶಸ್ತಿ- ಅವಿತಾಸ್‌ ಎಡೋಲಸ್‌ ಕುಟಿನ್ಹಾ (ದ.ಕ.), ಶಿಕ್ಷಣ ಪ್ರಶಸ್ತಿ- 

ಡಾ. ಲಕ್ಷ್ಮಣ್‌ ಸಾಬ್‌ ಚೌರಿ (ಬಾಗಲಕೋಟೆ) ವಿಶೇಷ ಪ್ರಶಸ್ತಿ- ಸಮರ್ಥನಂ ಟ್ರಸ್ಟ್‌ (ಬೆಂಗಳೂರು) 2021ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಾಹಿತ್ಯ ಪ್ರಶಸ್ತಿ: ಕನ್ನಡ – ರಹ್ಮತ್‌ ತರೀಕೆರೆ (ಚಿಕ್ಕಮಗಳೂರು), ಕೊಂಕಣಿ – ಮೆಲ್ವಿನ್‌ ರಾಡ್ರಿಗಸ್‌ (ದ.ಕ.), ತುಳು- ಬಿ.ಕೆ. ಗಂಗಾಧರ್‌ ಕಿರೋಡಿಯನ್‌ (ದ.ಕ.), ಮಾಧ್ಯಮ ಪ್ರಶಸ್ತಿ- 

ಡಾ. ಟಿ.ಸಿ. ಪೂರ್ಣಿಮಾ ( ಮೈಸೂರು), ಕೊಂಕಣಿ ಸಂಗೀತ ಪ್ರಶಸ್ತಿ- ಆಲ್ವಿನ್‌ ನೊರೊನ್ಹಾ (ದ.ಕ.), ಕಲಾ ಪ್ರಶಸ್ತಿ- ಕಾಸರಗೋಡು ಚಿನ್ನಾ (ಕಾಸರಗೋಡು), ಶಿಕ್ಷಣ ಪ್ರಶಸ್ತಿ- ಡಾ. ಪಿ.ಕೆ. ರಾಜಶೇಖರ್‌ (ಮೈಸೂರು), ವಿಶೇಷ ಪ್ರಶಸ್ತಿ- ಸ. ರಘುನಾಥ್‌ (ಚಿಕ್ಕಬಳ್ಳಾಪುರ) 2022ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರಿಗೆ ಫೆಬ್ರವರಿ 22ರ ಸಂಜೆ 4.30 ಕ್ಕೆ ಸಂದೇಶ ಪ್ರತಿಷ್ಠಾನ ಆವರಣ ತುಮಕೂರು ಮಂಗಳೂರು ಇಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ. 

ವಲೇರಿಯನ್‌ ರಾಡ್ರಿಗಸ್‌ ಅಧ್ಯಕ್ಷತೆಯ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಡಾ. ಬಿ.ಎಸ್‌. ತಲ್ವಾಡಿ, 

ಡಾ. ನಾ.ದಾ.ಶೆಟ್ಟಿ, ಕೊನ್‌ಸೆಪಾr ಆಳ್ವ, ಚಂದ್ರಕಲಾ ನಂದಾವರ ಮತ್ತು ಮೊಹಮ್ಮದ್‌ ಬಡೂರು ಸದಸ್ಯರಾಗಿದ್ದಾರೆ. ಪ್ರತಿಷ್ಠಾನದ ನಿರ್ದೇಶಕ ಫಾ| ಫ್ರಾನ್ಸಿಸ್‌ ಅಸ್ಸಿಸಿ ಅಲ್ಮೆಡಾ, ಮ್ಯಾನೇಜರ್‌ ಸೈಮನ್‌ ಡಿ’ಸೋಜಾ ಉಪಸ್ಥಿತರಿದ್ದರು.                    

ಇತ್ತೀಚಿನ ಸುದ್ದಿ

ಜಾಹೀರಾತು