7:07 PM Sunday1 - February 2026
ಬ್ರೇಕಿಂಗ್ ನ್ಯೂಸ್
ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ

ಇತ್ತೀಚಿನ ಸುದ್ದಿ

ಪ್ರವಾಹ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಂಜುಂಡೇಶ್ವರನಿಗೆ ಜಲದಿಗ್ಬಂಧನ

19/07/2024, 21:05

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೇರಳದ ವಯನಾಡು ಹಾಗೂ ಕಪಿಲಾ ನದಿ ಪ್ರಾಂತ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಯು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಕಬಿನಿ ಜಲಾಶಯದಿಂದ ಸುಮಾರು 60 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗಿದೆ. ಈ ಹಿನ್ನೆಲೆ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿಯ ಪ್ರವಾಹ ದೇವಾಲಯದ ಸಮೀಪದವರೆಗೂ ಹರಿದು ಬಂದಿದೆ.
ದೇವಾಲಯದ ಸುತ್ತಮುತ್ತ ತಗ್ಗು ಪ್ರದೇಶಗಳಿಗೆ ನುಗ್ಗಿರುವ ನೀರು ಒಂದು ರೀತಿ ಜಲ ದಿಗ್ಬಂಧನ ಹಾಕಿದಂತಿದೆ.


ಪ್ರವಾಹದಿಂದಾಗಿ ಐತಿಹಾಸಿಕ ಹಳೆ ಸೇತುವೆ, ಹದಿನಾರುಕಾಲು ಮಂಟಪ, ಪರಶುರಾಮ ದೇವಾಲಯ, ಅಯ್ಯಪ್ಪ ಸ್ವಾಮಿ, ದೇವಾಲಯ ಸುಕ್ಷೇತ್ರ ಶ್ರೀ ಮಲ್ಲನ ಮೂಲೆ ಮಠ, ಲಿಂಗಾಭಟರ ಗುಡಿ, ಚಾಮುಂಡೇಶ್ವರಿ ದೇವಾಲಯ, ಸೇರಿದಂತೆ ಪಟ್ಟಣದ ಹಳ್ಳದ ಕೇರಿ, ತೋಪಿನ ಬೀದಿಗಳಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿವೆ. ಇದರಿಂದ ಎಚ್ಚೆತ್ತ ಜಿಲ್ಲಾ ಮತ್ತು ತಾಲೂಕ ಆಡಳಿತ ಮುಂಜಾಗ್ರತಾ ಕ್ರಮ ಕೈಗೊಂಡು ತಗ್ಗು ಪ್ರದೇಶದ ಹಾಗೂ ಮುಳುಗಡೆಯಾದ ಮನೆಗಳ ಸಂತ್ರಸ್ತರಿಗೆ ಕಾಳಜಿ ಕೇಂದ್ರಗಳನ್ನು ತೆರೆದು ಆಶ್ರಯ ನೀಡಲಾಗಿದೆ.
ನಂಜನಗೂಡಿನ ನೆರೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ತಹಶೀಲ್ದಾರ್ ಶಿವಕುಮಾರ್ ಕಾಸನೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಳೆಯು ಹೀಗೆ ಮುಂದುವರೆದರೆ ಇನ್ನೂ ಅಪಾಯದ ಮಟ್ಟ ಮೀರುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು