2:58 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಟೆಕ್ಕಿ ಹೆಬ್ಬೆ ಜಲಪಾತದಲ್ಲಿ ನೀರುಪಾಲು: ಗೆಳೆಯರ ಜತೆ ಬಂದಿದ್ದ ಯುವಕ

04/11/2024, 11:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಅಮಿತ್ ಕುಮಾರ್ (30) ಮೃತ‌ ದುರ್ದೈವಿ.


ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತದಲ್ಲಿ ಯುವಕ ನೀರು ಪಾಲಾಗಿದ್ದ. ಮೃತ ಅಮಿತ್ ಮೂಲತಃ ಛತ್ತೀಸ್ ಘಡದ ನಿವಾಸಿ.ಸಲಾಂ ಕರೀಂ ಎಂಬ ಸ್ನೇಹಿತನ ಜೊತೆ ಪ್ರವಾಸಕ್ಕೆ ಅಮಿತ್ ಬಂದಿದ್ದ.
ಸಲಾಂ ಕರೀಂ ಮೂಲತಃ ತಮಿಳು‌ನಾಡಿನ ಸ್ನೇಹಿತ.
ಬೆಂಗಳೂರಿನಲ್ಲಿ ಇಬ್ಬರು ಒಂದೇ ರೂಂನಲ್ಲಿದ್ದು, ಬೇರೆ-ಬೇರೆ ಕಂಪನಿಯಲ್ಲಿ ಕೆಲಸ ಮಾಡ್ತಿದ್ರು. 3 ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದರು.
ಇಂದು ಹೆಬ್ಬೆ ಜಲಪಾತದಲ್ಲಿ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಅಮಿತ್ ಸಾವನ್ನಪ್ಪಿದ್ದಾನೆ.
ಫಾರೆಸ್ಟ್ ಗಾರ್ಡ್ ಆಳ ಇದೆ ಬೇಡ ಎಂದರೂ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು