10:35 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪ್ರವೀಣ್ ಹತ್ಯೆ ಹಿನ್ನೆಲೆ: ಸುಳ್ಯ ಸ್ವಯಂಪ್ರೇರಿತ ಬಂದ್ ; ಖಾಸಗಿ ಬಸ್, ಆಟೋ ಸಂಚಾರ ಸ್ಥಗಿತ

27/07/2022, 12:50

ಸುಳ್ಯ(reporterkarnataka.com): ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ಸುಳ್ಯದಲ್ಲಿ 
ಬಹುತೇಕ ಅಂಗಡಿ- ಮುಂಗಟ್ಟು ಮುಚ್ಚಿವೆ.
ಸಂಘಪರಿವಾರ ಕಾರ್ಯಕರ್ತರಿಂದ ಅಂಗಡಿಗಳ ಮುಂಗಟ್ಟು ಬಂದ್‌ ಮಾಡಲು ಕರೆ ನೀಡಿದ್ದಾರೆ.

ಸುಳ್ಯ ಹಳೆ ಗೇಟಿನಿಂದ ರಥ ಬೀದಿವರೆಗೆ ಎಲ್ಲಾ ಅಂಗಡಿಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದು, ರಥ ಬೀದಿಯಿಂದ ಗಾಂಧಿನಗರದ ಕೆಲವು ಅಂಗಡಿಗಳು ಕಾರ್ಯಚರಿಸುತ್ತಿದೆ. ಖಾಸಗಿ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಆಟೋ ಚಾಲಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದು, ಸುಮಾರು 50ಕ್ಕೂ ಹೆಚ್ಚು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಸುಳ್ಯ ಮುಖ್ಯ ರಸ್ತೆಯಲ್ಲಿ ಚಲಿಸುತ್ತಾ ಬಂದಿಗೆ ಕರೆ ನೀಡುತ್ತಿದ್ದಾರೆ.ಮೆಡಿಕಲ್ ಅಂಗಡಿಗಳು, ಹಾಲಿನ ಅಂಗಡಿಗಳು ಎಂದಿನಂತೆ ಕಾರ್ಯಚರಿಸುತ್ತಿದೆ.

ಶಾಲಾ ವಿದ್ಯಾರ್ಥಿಗಳು ಅವರವರ ಮನೆಗೆ ತೆರಳುತ್ತಿದ್ದು ಸುಳ್ಯದ ಕೆಲವು ಶಾಲೆಗಳು ಈಗಾಗಲೇ ರಜೆ ಘೋಷಿಸಿದೆ ಎಂದು ತಿಳಿದುಬಂದಿದೆ. ಸುಳ್ಯ ಜೂನಿಯರ್ ಕಾಲೇಜಿಗೆ ರಜೆ ಘೋಷಿಸಲಾಗಿದೆ.ಖಾಸಗಿ ಬಸ್ ನಿಲ್ದಾಣ ಬಳಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ರಸ್ತೆಯಲ್ಲಿ ಟೈಯರ್ ಬೆಂಕಿ ಕೊಟ್ಟು ಹತ್ತು ನಿಮಿಷಗಳ ಕಾಲ ರಸ್ತೆ ಸಂಚಾರ ಬಂದ್ ಮಾಡಿ ಆರೋಪಿಗಳನ್ನು ಕೂಡಲೆ ಬಂಧಿಸುವಂತೆ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು