5:57 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಪ್ರವೀಣ್ ಕೊಲೆ ಪ್ರಕರಣ: 15 ಮಂದಿ ಪೊಲೀಸ್ ವಶಕ್ಕೆ: 1678 ನಂಬರ್‌ನ ಬೈಕ್‌ನಲ್ಲಿ ಬಂದಿದ್ರಾ ಹಂತಕರು?

27/07/2022, 13:31

ಮಂಗಳೂರು(reporterkarnataka.com): ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ 4 ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಪ್ರಕರಣ ಸಂಬಂಧ15 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣ ಸಂಬಂಧಿಸಿದಂತೆ ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ, ರಾಜಕೀಯ, ವೈಯುಕ್ತಿಕ ಹಾಗೂ ಕೋಮುದ್ವೇಷದ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಜೊತೆಗೆ ಸಿಸಿಟಿವಿ, ಮೊಬೈಲ್ ಲೊಕೇಷನ್ ಆಧಾರದಲ್ಲಿ ತನಿಖೆ ನಡೆಯುತ್ತಿದೆ. 

ಇದೀಗ 15 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅವರು ಕೊಲೆಗಾರರಿಗೆ ಸಹಾಯ ಮಾಡಿರುವ ಶಂಕೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಯುತ್ತಿದೆ. ಅವರಲ್ಲಿ ಹೆಚ್ಚಿನವರು ಸ್ಥಳೀಯರು ಎಂದು ಹೇಳಲಾಗುತ್ತಿದೆ.

ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿಲ್ಲ.ಪ್ರವೀಣ್ ನೆಟ್ಟಾರು ತಂದೆ ತಾಯಿಗೆ ಓಬ್ಬನೇ ಮಗ ನಾಲ್ಕು ವರ್ಷದ ಹಿಂದೆ ಮದುವೆಯಾಗಿತ್ತು. ಅಕ್ಷಯ್ ಫಾರ್ಮ್ ಫ್ರೆಶ್ ಚಿಕನ್ ಸೆಂಟರ್ ನಡೆಸುತ್ತಿದ್ದರು.ಬಿಜೆಪಿ ಕಾರ್ಯಕರ್ತನಾಗಿದ್ದ ಈತನ ವಿರುದ್ಧ ಯಾವುದೇ ಠಾಣೆಗಳಲ್ಲಿ ಪ್ರಕರಣಗಳಿಲ್ಲ.

ಬೈಕ್ ನಂಬರ್ 1678 ನಿನ್ನೆ ರಾತ್ರಿ 8.30ರ ಸಮಯ ಎಂದಿನಂತೆ ಕೋಳಿ ಅಂಗಡಿ ಮುಚ್ಚುತ್ತಿದ್ದ ವೇಳೆ ಅಲ್ಲಿಗೆ ಬಂದ ಕೇರಳ ನೋಂದಣಿಯ 1678 ಸಂಖ್ಯೆಯ ಪ್ಲೆಂಡರ್ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ತಲೆ ಹಾಗೂ ಕುತ್ತಿಗೆಗೆ ಹೊಡೆದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ವೇಳೆ ಸ್ವಲ್ಪ ದೂರದ ವರೆಗೆ ಪ್ರವೀಣ್ ಓಡಿಹೋಗಿ ಕುಸಿದು ಬಿದ್ದಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಲೇ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು