12:13 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪ್ರವೀಣ್ ಕೊಲೆ ಪ್ರಕರಣ: 15 ಮಂದಿ ಪೊಲೀಸ್ ವಶಕ್ಕೆ: 1678 ನಂಬರ್‌ನ ಬೈಕ್‌ನಲ್ಲಿ ಬಂದಿದ್ರಾ ಹಂತಕರು?

27/07/2022, 13:31

ಮಂಗಳೂರು(reporterkarnataka.com): ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ 4 ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಪ್ರಕರಣ ಸಂಬಂಧ15 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣ ಸಂಬಂಧಿಸಿದಂತೆ ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ, ರಾಜಕೀಯ, ವೈಯುಕ್ತಿಕ ಹಾಗೂ ಕೋಮುದ್ವೇಷದ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಜೊತೆಗೆ ಸಿಸಿಟಿವಿ, ಮೊಬೈಲ್ ಲೊಕೇಷನ್ ಆಧಾರದಲ್ಲಿ ತನಿಖೆ ನಡೆಯುತ್ತಿದೆ. 

ಇದೀಗ 15 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅವರು ಕೊಲೆಗಾರರಿಗೆ ಸಹಾಯ ಮಾಡಿರುವ ಶಂಕೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಯುತ್ತಿದೆ. ಅವರಲ್ಲಿ ಹೆಚ್ಚಿನವರು ಸ್ಥಳೀಯರು ಎಂದು ಹೇಳಲಾಗುತ್ತಿದೆ.

ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿಲ್ಲ.ಪ್ರವೀಣ್ ನೆಟ್ಟಾರು ತಂದೆ ತಾಯಿಗೆ ಓಬ್ಬನೇ ಮಗ ನಾಲ್ಕು ವರ್ಷದ ಹಿಂದೆ ಮದುವೆಯಾಗಿತ್ತು. ಅಕ್ಷಯ್ ಫಾರ್ಮ್ ಫ್ರೆಶ್ ಚಿಕನ್ ಸೆಂಟರ್ ನಡೆಸುತ್ತಿದ್ದರು.ಬಿಜೆಪಿ ಕಾರ್ಯಕರ್ತನಾಗಿದ್ದ ಈತನ ವಿರುದ್ಧ ಯಾವುದೇ ಠಾಣೆಗಳಲ್ಲಿ ಪ್ರಕರಣಗಳಿಲ್ಲ.

ಬೈಕ್ ನಂಬರ್ 1678 ನಿನ್ನೆ ರಾತ್ರಿ 8.30ರ ಸಮಯ ಎಂದಿನಂತೆ ಕೋಳಿ ಅಂಗಡಿ ಮುಚ್ಚುತ್ತಿದ್ದ ವೇಳೆ ಅಲ್ಲಿಗೆ ಬಂದ ಕೇರಳ ನೋಂದಣಿಯ 1678 ಸಂಖ್ಯೆಯ ಪ್ಲೆಂಡರ್ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ತಲೆ ಹಾಗೂ ಕುತ್ತಿಗೆಗೆ ಹೊಡೆದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ವೇಳೆ ಸ್ವಲ್ಪ ದೂರದ ವರೆಗೆ ಪ್ರವೀಣ್ ಓಡಿಹೋಗಿ ಕುಸಿದು ಬಿದ್ದಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಲೇ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು