11:12 PM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಪ್ರವೀಣ್ ಕೊಲೆ ಪ್ರಕರಣ: 15 ಮಂದಿ ಪೊಲೀಸ್ ವಶಕ್ಕೆ: 1678 ನಂಬರ್‌ನ ಬೈಕ್‌ನಲ್ಲಿ ಬಂದಿದ್ರಾ ಹಂತಕರು?

27/07/2022, 13:31

ಮಂಗಳೂರು(reporterkarnataka.com): ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ 4 ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಪ್ರಕರಣ ಸಂಬಂಧ15 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣ ಸಂಬಂಧಿಸಿದಂತೆ ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ, ರಾಜಕೀಯ, ವೈಯುಕ್ತಿಕ ಹಾಗೂ ಕೋಮುದ್ವೇಷದ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಜೊತೆಗೆ ಸಿಸಿಟಿವಿ, ಮೊಬೈಲ್ ಲೊಕೇಷನ್ ಆಧಾರದಲ್ಲಿ ತನಿಖೆ ನಡೆಯುತ್ತಿದೆ. 

ಇದೀಗ 15 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅವರು ಕೊಲೆಗಾರರಿಗೆ ಸಹಾಯ ಮಾಡಿರುವ ಶಂಕೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಯುತ್ತಿದೆ. ಅವರಲ್ಲಿ ಹೆಚ್ಚಿನವರು ಸ್ಥಳೀಯರು ಎಂದು ಹೇಳಲಾಗುತ್ತಿದೆ.

ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿಲ್ಲ.ಪ್ರವೀಣ್ ನೆಟ್ಟಾರು ತಂದೆ ತಾಯಿಗೆ ಓಬ್ಬನೇ ಮಗ ನಾಲ್ಕು ವರ್ಷದ ಹಿಂದೆ ಮದುವೆಯಾಗಿತ್ತು. ಅಕ್ಷಯ್ ಫಾರ್ಮ್ ಫ್ರೆಶ್ ಚಿಕನ್ ಸೆಂಟರ್ ನಡೆಸುತ್ತಿದ್ದರು.ಬಿಜೆಪಿ ಕಾರ್ಯಕರ್ತನಾಗಿದ್ದ ಈತನ ವಿರುದ್ಧ ಯಾವುದೇ ಠಾಣೆಗಳಲ್ಲಿ ಪ್ರಕರಣಗಳಿಲ್ಲ.

ಬೈಕ್ ನಂಬರ್ 1678 ನಿನ್ನೆ ರಾತ್ರಿ 8.30ರ ಸಮಯ ಎಂದಿನಂತೆ ಕೋಳಿ ಅಂಗಡಿ ಮುಚ್ಚುತ್ತಿದ್ದ ವೇಳೆ ಅಲ್ಲಿಗೆ ಬಂದ ಕೇರಳ ನೋಂದಣಿಯ 1678 ಸಂಖ್ಯೆಯ ಪ್ಲೆಂಡರ್ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ತಲೆ ಹಾಗೂ ಕುತ್ತಿಗೆಗೆ ಹೊಡೆದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ವೇಳೆ ಸ್ವಲ್ಪ ದೂರದ ವರೆಗೆ ಪ್ರವೀಣ್ ಓಡಿಹೋಗಿ ಕುಸಿದು ಬಿದ್ದಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಲೇ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು