6:33 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಎನ್​ಐಎ ತಂಡದಿಂದ 4ನೇ ಆರೋಪಿಯ ಸಕಲೇಶಪುರದಲ್ಲಿ ಬಂಧನ

10/05/2024, 13:33

ಮಂಗಳೂರು(reporterkarnataka.com): ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಆರೋಪಿಯನ್ನು ಎನ್​ಐಎ ತಂಡ ಬಂಧಿಸಿದೆ.
ಸುಳ್ಯದ‌ ಶಾಂತಿ ನಗರ ನಿವಾಸಿಯಾದ ಮುಸ್ತಫಾ ಪೈಚಾರ್ ಎಂಬಾತನನ್ನು ಎನ್​ಐಎ ತಂಡ ಹಾಸನದ‌ ಸಕಲೇಶಪುರ ಬಳಿ ದಸ್ತಗಿರಿ ಮಾಡಿದೆ. ಈತ ಪಿಎಫ್ಐ ಮುಖಂಡ ಎನ್ನಲಾಗಿದೆ. ಆರೋಪಿಯು ಹಾಸನ ಜಿಲ್ಲೆಯ ಸಕಲೇಶಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲೆ ಮರೆಸಿಕೊಂಡಿದ್ದ. ಎನ್​ಐಎ ಇನ್ಸ್ ಪೆಕ್ಟರ್ ಷಣ್ಮುಗಂ ಅವರ ತಂಡ ಆರೋಪಿಯ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಪ್ರವೀಣ್ ನೆಟ್ಟಾರ್ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆ ಮಾಡಿದ್ದರು.ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆಯತ್ತ ಕೊಂಡೊಯ್ದಿದ್ದಾರೆ.
ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಆರೋಪಿ ಮುಸ್ತಫಾ ಪೈಚಾರ್ ತಲೆಮರೆಸಿಕೊಂಡಿದ್ದು ಹೀಗಾಗಿ ಆತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್​ಐಎ ಅಧಿಕಾರಿಗಳು ಘೋಷಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು