2:44 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಎನ್​ಐಎ ತಂಡದಿಂದ 4ನೇ ಆರೋಪಿಯ ಸಕಲೇಶಪುರದಲ್ಲಿ ಬಂಧನ

10/05/2024, 13:33

ಮಂಗಳೂರು(reporterkarnataka.com): ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಆರೋಪಿಯನ್ನು ಎನ್​ಐಎ ತಂಡ ಬಂಧಿಸಿದೆ.
ಸುಳ್ಯದ‌ ಶಾಂತಿ ನಗರ ನಿವಾಸಿಯಾದ ಮುಸ್ತಫಾ ಪೈಚಾರ್ ಎಂಬಾತನನ್ನು ಎನ್​ಐಎ ತಂಡ ಹಾಸನದ‌ ಸಕಲೇಶಪುರ ಬಳಿ ದಸ್ತಗಿರಿ ಮಾಡಿದೆ. ಈತ ಪಿಎಫ್ಐ ಮುಖಂಡ ಎನ್ನಲಾಗಿದೆ. ಆರೋಪಿಯು ಹಾಸನ ಜಿಲ್ಲೆಯ ಸಕಲೇಶಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲೆ ಮರೆಸಿಕೊಂಡಿದ್ದ. ಎನ್​ಐಎ ಇನ್ಸ್ ಪೆಕ್ಟರ್ ಷಣ್ಮುಗಂ ಅವರ ತಂಡ ಆರೋಪಿಯ ಬಂಧಿಸುವಲ್ಲಿ ಯಶಸ್ವಿಯಾಗಿದೆ.ಪ್ರವೀಣ್ ನೆಟ್ಟಾರ್ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆ ಮಾಡಿದ್ದರು.ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆಯತ್ತ ಕೊಂಡೊಯ್ದಿದ್ದಾರೆ.
ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಆರೋಪಿ ಮುಸ್ತಫಾ ಪೈಚಾರ್ ತಲೆಮರೆಸಿಕೊಂಡಿದ್ದು ಹೀಗಾಗಿ ಆತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್​ಐಎ ಅಧಿಕಾರಿಗಳು ಘೋಷಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು