12:04 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ: ಸರಕಾರದ ವೈಫಲ್ಯ ವಿರೋಧಿಸಿ ಉಡುಪಿಯಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ

28/07/2022, 23:32

ಉಡುಪಿ(reporterkarnataka.com):
ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆಯ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ಉಡುಪಿಗೆ ಮಲ್ಪೆ ಭಾಗದ ತೆಂಕನಿಡಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯಪ್ರಕಾಶ್ ಬೈಲಕರೆ ಮತ್ತು 50ಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿಯಲ್ಲಿ ಜವಾಬ್ದಾರಿಯಿಂದ ದುಡಿದಿದ್ದೇವೆ. ಆದರೇ ಈಗ ಕಾರ್ಯಕರ್ತರಿಗೆ ರಕ್ಷಣೆಯ ಭರವಸೆಯನ್ನು ಕಳೆದುಕೊಂಡು ನೋವಿನಿಂದ ರಾಜೀನಾಮೆ ನೀಡುತ್ತೇವೆ ಎಂದು ತಿಳಿಸಲಾಗಿದೆ.

ಬಿಜೆಪಿಯ ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕ ನಿಟ್ಟೆ ಸುದೀಪ್ ಶೆಟ್ಟಿಯೂ ತಮ್ಮ ಜವಾಬ್ದಾರಿ ಗೆ ರಾಜಿನಾಮೆ ನೀಡಿದ್ದಾರೆ.

ಈ ಹಿಂದೆ ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 22ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಕೊಲೆಯಾದಾಗ ನಾವು ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಅವುಗಳನ್ನು ಖಂಡಿಸಿದ್ದೇವೆ. ಈಗ ನಮ್ಮದೇ ಪಕ್ಷ ಅಧಿಕಾರದಲ್ಲಿರುವಾಗ ನಡೆಯುತ್ತಿರುವ ಕೊಲೆಗಳ ಸಂದರ್ಭದಲ್ಲಿ ನಮ್ಮ ನಡೆ, ನಿಲುವನ್ನು ಸಮರ್ಥಿಸಲು ಸಾಧ್ಯವಿಲ್ಲ, ಆದ್ದರಿಂದ ರಾಜೀನಾಮೆ ನೀಡುವುದಾಗಿ ಸುದೀಪ್ ಶೆಟ್ಟಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು