ಇತ್ತೀಚಿನ ಸುದ್ದಿ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ ಐಎ ತಂಡದಿಂದ ಆರೋಪಿ ಕೊಡಗಿನ ಅಬ್ದುಲ್ ರೆಹಮಾನ್ ಬಂಧನ
04/07/2025, 19:44

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಲ್ಲಿ ತಲೆ ಮರೆಸಿಕೊಂಡಿದ್ದ ಎನ್ನಲಾದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲಂದರ್ ಎಂಬಾತನನ್ನು ಎನ್ ಐಎ ಅಧಿಕಾರಿಗಳು ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿದ್ದ ಅಬ್ದುಲ್ ರೆಹಮಾನ್ ಘಟನೆ ಬಳಿಕ ವಿದೇಶದಲ್ಲಿ ತಲೆಮಾರೆಸಿಕೊಂಡಿದ್ದ. ಈ ಬಗ್ಗೆ ಎನ್ ಐಎ ಅಧಿಕಾರಿಗಳು ತೀವ್ರ ಶೋಧ ನಡೆಸಿದ ಬಳಿಕ ಮಾಹಿತಿ ಅಬ್ದುಲ್ ರೆಹಮಾನ್ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಸಹ ಘೋಷಣೆ ಮಾಡಲಾಗಿತ್ತು. ಇದೀಗ ಬಂಧನಕ್ಕೆ ಒಳಗಾಗಿರುವ ರೆಹಮಾನ್ ನನ್ನು ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರೂಪಡಿಸಿದ್ದಾರೆ.