1:07 AM Wednesday6 - August 2025
ಬ್ರೇಕಿಂಗ್ ನ್ಯೂಸ್
ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ…

ಇತ್ತೀಚಿನ ಸುದ್ದಿ

ಪ್ರಯಾಣಿಕರಿಂದ ತುಂಬಿರುವ ಸರಕಾರಿ ಸಿಟಿ ಬಸ್: ಇದು ಕೊರೊನಾ 3ನೇ ಅಲೆಗೆ ಸಿದ್ಧತೆಯೇ?: ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

25/06/2021, 17:03

ಮಂಗಳೂರು(reporterkarnataka news); ಸ್ಟೇಟ್ ಬ್ಯಾಂಕ್ – ತಲಪಾಡಿ ಸರಕಾರಿ ಬಸ್ ಸೇರಿದಂತೆ ಹಲವು ಕಡೆ ಸಂಚರಿಸುವ ನರ್ಮ್ ಬಸ್ ಗಳು ಬೆಳಗ್ಗೆ ಹಾಗೂ ಸಂಜೆ ವೇಳೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಕೊರೊನಾ 3ನೇ ಅಲೆಗೆ ಇಲ್ಲಿಂದಲೇ ಸಿದ್ಧತೆ ನಡೆಸಿದಾಗೆ ಇದೆ ಎಂದು ಸಾರ್ವಜನಿಕ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಜುಲೈ 1ರ ವರೆಗೆ ಖಾಸಗಿ ಸಿಟಿ ಬಸ್ ಗಳ ಓಡಾಟವಿಲ್ಲದ ಕಾರಣ
ಪ್ರಯಾಣಿಕರು ಸರಕಾರದ ನರ್ಮ್ ಬಸ್ ಗಳನ್ನೇ ಆಶ್ರಯಿಸಬೇಕಾಗಿದೆ. ಇದು ಪ್ರಯಾಣಿಕರ ತಪ್ಪಲ್ಲ, ಸ್ವಂತ ವಾಹನ ಇಲ್ಲದವರು ಯಾವುದೇ ರಿಸ್ಕ್ ತೆಗೆದುಕೊಂಡಾದರೂ ಗಮ್ಯ ಸ್ಥಾನ ಸೇರಲೇ ಬೇಕು. ಜಿಲ್ಲಾಡಳಿತ ಇದಕ್ಕೆ ತಕ್ಕ ವ್ಯವಸ್ಥೆ ಮಾಡಲು ವಿಫಲವಾಗಿರುವುದರಿಂದ ಕೊರೊನಾ ಗೈಡ್ ಲೈನ್ಸ್ ಉಲ್ಲಂಘಿಸಿ ನಾಗರಿಕರು ಪ್ರಯಾಣ ಮಾಡುವ ಪ್ರಮೇಯ ಒದಗಿ ಬಂದಿದೆ.

ತೊಕ್ಕೊಟ್ಟು, ತಲಪಾಡಿ, ಸುರತ್ಕಲ್, ಬೊಂದೇಲ್, ಕಾವೂರು ಮುಂತಾದ ಕಡೆ ಮಾಮೂಲಿಯಾಗಿ ಪ್ರಯಾಣಿಕರ ಸಂಖ್ಯೆಯೂ ಜಾಸ್ತಿ ಇರುತ್ತದೆ. ಹಾಗಾಗಿ ಪ್ರಯಾಣಿಕರ ಸಾಂದ್ರತೆ ಜಾಸ್ತಿ ಇರುವ ರೂಟ್ ಗಳಿಗೆ ನಾಲ್ಕು ಬಸ್ ಜಾಸ್ತಿ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎನ್ನುವುದು ನಾಗರಿಕರ ಅಭಿಪ್ರಾಯ. ಇಲ್ಲದಿದ್ದರೆ ಕೊರೊನಾ 3ನೇ ಅಲೆಗೆ ನಾವೇ ಸಿದ್ಧತೆ ಮಾಡಿದಾಗೆ ಆಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು