8:06 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಪ್ರಯಾಣಿಕರಿಂದ ತುಂಬಿರುವ ಸರಕಾರಿ ಸಿಟಿ ಬಸ್: ಇದು ಕೊರೊನಾ 3ನೇ ಅಲೆಗೆ ಸಿದ್ಧತೆಯೇ?: ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

25/06/2021, 17:03

ಮಂಗಳೂರು(reporterkarnataka news); ಸ್ಟೇಟ್ ಬ್ಯಾಂಕ್ – ತಲಪಾಡಿ ಸರಕಾರಿ ಬಸ್ ಸೇರಿದಂತೆ ಹಲವು ಕಡೆ ಸಂಚರಿಸುವ ನರ್ಮ್ ಬಸ್ ಗಳು ಬೆಳಗ್ಗೆ ಹಾಗೂ ಸಂಜೆ ವೇಳೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಕೊರೊನಾ 3ನೇ ಅಲೆಗೆ ಇಲ್ಲಿಂದಲೇ ಸಿದ್ಧತೆ ನಡೆಸಿದಾಗೆ ಇದೆ ಎಂದು ಸಾರ್ವಜನಿಕ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಜುಲೈ 1ರ ವರೆಗೆ ಖಾಸಗಿ ಸಿಟಿ ಬಸ್ ಗಳ ಓಡಾಟವಿಲ್ಲದ ಕಾರಣ
ಪ್ರಯಾಣಿಕರು ಸರಕಾರದ ನರ್ಮ್ ಬಸ್ ಗಳನ್ನೇ ಆಶ್ರಯಿಸಬೇಕಾಗಿದೆ. ಇದು ಪ್ರಯಾಣಿಕರ ತಪ್ಪಲ್ಲ, ಸ್ವಂತ ವಾಹನ ಇಲ್ಲದವರು ಯಾವುದೇ ರಿಸ್ಕ್ ತೆಗೆದುಕೊಂಡಾದರೂ ಗಮ್ಯ ಸ್ಥಾನ ಸೇರಲೇ ಬೇಕು. ಜಿಲ್ಲಾಡಳಿತ ಇದಕ್ಕೆ ತಕ್ಕ ವ್ಯವಸ್ಥೆ ಮಾಡಲು ವಿಫಲವಾಗಿರುವುದರಿಂದ ಕೊರೊನಾ ಗೈಡ್ ಲೈನ್ಸ್ ಉಲ್ಲಂಘಿಸಿ ನಾಗರಿಕರು ಪ್ರಯಾಣ ಮಾಡುವ ಪ್ರಮೇಯ ಒದಗಿ ಬಂದಿದೆ.

ತೊಕ್ಕೊಟ್ಟು, ತಲಪಾಡಿ, ಸುರತ್ಕಲ್, ಬೊಂದೇಲ್, ಕಾವೂರು ಮುಂತಾದ ಕಡೆ ಮಾಮೂಲಿಯಾಗಿ ಪ್ರಯಾಣಿಕರ ಸಂಖ್ಯೆಯೂ ಜಾಸ್ತಿ ಇರುತ್ತದೆ. ಹಾಗಾಗಿ ಪ್ರಯಾಣಿಕರ ಸಾಂದ್ರತೆ ಜಾಸ್ತಿ ಇರುವ ರೂಟ್ ಗಳಿಗೆ ನಾಲ್ಕು ಬಸ್ ಜಾಸ್ತಿ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎನ್ನುವುದು ನಾಗರಿಕರ ಅಭಿಪ್ರಾಯ. ಇಲ್ಲದಿದ್ದರೆ ಕೊರೊನಾ 3ನೇ ಅಲೆಗೆ ನಾವೇ ಸಿದ್ಧತೆ ಮಾಡಿದಾಗೆ ಆಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು