5:18 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪ್ರಯಾಣಿಕರಿಂದ ತುಂಬಿರುವ ಸರಕಾರಿ ಸಿಟಿ ಬಸ್: ಇದು ಕೊರೊನಾ 3ನೇ ಅಲೆಗೆ ಸಿದ್ಧತೆಯೇ?: ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

25/06/2021, 17:03

ಮಂಗಳೂರು(reporterkarnataka news); ಸ್ಟೇಟ್ ಬ್ಯಾಂಕ್ – ತಲಪಾಡಿ ಸರಕಾರಿ ಬಸ್ ಸೇರಿದಂತೆ ಹಲವು ಕಡೆ ಸಂಚರಿಸುವ ನರ್ಮ್ ಬಸ್ ಗಳು ಬೆಳಗ್ಗೆ ಹಾಗೂ ಸಂಜೆ ವೇಳೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಕೊರೊನಾ 3ನೇ ಅಲೆಗೆ ಇಲ್ಲಿಂದಲೇ ಸಿದ್ಧತೆ ನಡೆಸಿದಾಗೆ ಇದೆ ಎಂದು ಸಾರ್ವಜನಿಕ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಜುಲೈ 1ರ ವರೆಗೆ ಖಾಸಗಿ ಸಿಟಿ ಬಸ್ ಗಳ ಓಡಾಟವಿಲ್ಲದ ಕಾರಣ
ಪ್ರಯಾಣಿಕರು ಸರಕಾರದ ನರ್ಮ್ ಬಸ್ ಗಳನ್ನೇ ಆಶ್ರಯಿಸಬೇಕಾಗಿದೆ. ಇದು ಪ್ರಯಾಣಿಕರ ತಪ್ಪಲ್ಲ, ಸ್ವಂತ ವಾಹನ ಇಲ್ಲದವರು ಯಾವುದೇ ರಿಸ್ಕ್ ತೆಗೆದುಕೊಂಡಾದರೂ ಗಮ್ಯ ಸ್ಥಾನ ಸೇರಲೇ ಬೇಕು. ಜಿಲ್ಲಾಡಳಿತ ಇದಕ್ಕೆ ತಕ್ಕ ವ್ಯವಸ್ಥೆ ಮಾಡಲು ವಿಫಲವಾಗಿರುವುದರಿಂದ ಕೊರೊನಾ ಗೈಡ್ ಲೈನ್ಸ್ ಉಲ್ಲಂಘಿಸಿ ನಾಗರಿಕರು ಪ್ರಯಾಣ ಮಾಡುವ ಪ್ರಮೇಯ ಒದಗಿ ಬಂದಿದೆ.

ತೊಕ್ಕೊಟ್ಟು, ತಲಪಾಡಿ, ಸುರತ್ಕಲ್, ಬೊಂದೇಲ್, ಕಾವೂರು ಮುಂತಾದ ಕಡೆ ಮಾಮೂಲಿಯಾಗಿ ಪ್ರಯಾಣಿಕರ ಸಂಖ್ಯೆಯೂ ಜಾಸ್ತಿ ಇರುತ್ತದೆ. ಹಾಗಾಗಿ ಪ್ರಯಾಣಿಕರ ಸಾಂದ್ರತೆ ಜಾಸ್ತಿ ಇರುವ ರೂಟ್ ಗಳಿಗೆ ನಾಲ್ಕು ಬಸ್ ಜಾಸ್ತಿ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎನ್ನುವುದು ನಾಗರಿಕರ ಅಭಿಪ್ರಾಯ. ಇಲ್ಲದಿದ್ದರೆ ಕೊರೊನಾ 3ನೇ ಅಲೆಗೆ ನಾವೇ ಸಿದ್ಧತೆ ಮಾಡಿದಾಗೆ ಆಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು