1:36 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪ್ರಯಾಣಿಕರಿಂದ ತುಂಬಿರುವ ಸರಕಾರಿ ಸಿಟಿ ಬಸ್: ಇದು ಕೊರೊನಾ 3ನೇ ಅಲೆಗೆ ಸಿದ್ಧತೆಯೇ?: ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

25/06/2021, 17:03

ಮಂಗಳೂರು(reporterkarnataka news); ಸ್ಟೇಟ್ ಬ್ಯಾಂಕ್ – ತಲಪಾಡಿ ಸರಕಾರಿ ಬಸ್ ಸೇರಿದಂತೆ ಹಲವು ಕಡೆ ಸಂಚರಿಸುವ ನರ್ಮ್ ಬಸ್ ಗಳು ಬೆಳಗ್ಗೆ ಹಾಗೂ ಸಂಜೆ ವೇಳೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ಕೊರೊನಾ 3ನೇ ಅಲೆಗೆ ಇಲ್ಲಿಂದಲೇ ಸಿದ್ಧತೆ ನಡೆಸಿದಾಗೆ ಇದೆ ಎಂದು ಸಾರ್ವಜನಿಕ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಜುಲೈ 1ರ ವರೆಗೆ ಖಾಸಗಿ ಸಿಟಿ ಬಸ್ ಗಳ ಓಡಾಟವಿಲ್ಲದ ಕಾರಣ
ಪ್ರಯಾಣಿಕರು ಸರಕಾರದ ನರ್ಮ್ ಬಸ್ ಗಳನ್ನೇ ಆಶ್ರಯಿಸಬೇಕಾಗಿದೆ. ಇದು ಪ್ರಯಾಣಿಕರ ತಪ್ಪಲ್ಲ, ಸ್ವಂತ ವಾಹನ ಇಲ್ಲದವರು ಯಾವುದೇ ರಿಸ್ಕ್ ತೆಗೆದುಕೊಂಡಾದರೂ ಗಮ್ಯ ಸ್ಥಾನ ಸೇರಲೇ ಬೇಕು. ಜಿಲ್ಲಾಡಳಿತ ಇದಕ್ಕೆ ತಕ್ಕ ವ್ಯವಸ್ಥೆ ಮಾಡಲು ವಿಫಲವಾಗಿರುವುದರಿಂದ ಕೊರೊನಾ ಗೈಡ್ ಲೈನ್ಸ್ ಉಲ್ಲಂಘಿಸಿ ನಾಗರಿಕರು ಪ್ರಯಾಣ ಮಾಡುವ ಪ್ರಮೇಯ ಒದಗಿ ಬಂದಿದೆ.

ತೊಕ್ಕೊಟ್ಟು, ತಲಪಾಡಿ, ಸುರತ್ಕಲ್, ಬೊಂದೇಲ್, ಕಾವೂರು ಮುಂತಾದ ಕಡೆ ಮಾಮೂಲಿಯಾಗಿ ಪ್ರಯಾಣಿಕರ ಸಂಖ್ಯೆಯೂ ಜಾಸ್ತಿ ಇರುತ್ತದೆ. ಹಾಗಾಗಿ ಪ್ರಯಾಣಿಕರ ಸಾಂದ್ರತೆ ಜಾಸ್ತಿ ಇರುವ ರೂಟ್ ಗಳಿಗೆ ನಾಲ್ಕು ಬಸ್ ಜಾಸ್ತಿ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎನ್ನುವುದು ನಾಗರಿಕರ ಅಭಿಪ್ರಾಯ. ಇಲ್ಲದಿದ್ದರೆ ಕೊರೊನಾ 3ನೇ ಅಲೆಗೆ ನಾವೇ ಸಿದ್ಧತೆ ಮಾಡಿದಾಗೆ ಆಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು