1:45 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪ್ರೇಮ ವೈಫಲ್ಯ?: ಯುವಕನಿಂದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ; ಪಕ್ಕದಲ್ಲಿದ್ದ ಇನ್ನಿಬ್ಬರೂ ವಿದ್ಯಾರ್ಥಿನಿಯರಿಗೂ ಗಾಯ

04/03/2024, 16:53

ಮಂಗಳೂರು(reporterkarnataka.com): ಕಡಬ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೋರ್ವಳ ಮೇಲೆ ಆ್ಯಸಿಡ್​ ಎರಚಿದ್ದು, ಪಕ್ಕದಲ್ಲಿದ್ದ ಇನ್ನಿಬ್ಬರು ವಿದ್ಯಾರ್ಥಿ ನಿಯರೂ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜು ಆವರಣದಲ್ಲೇ ಆ್ಯಸಿಡ್​ ಎರಚಿದ್ದಾನೆ. ಈ ವೇಳೆ ಪಕ್ಕದಲ್ಲಿದ್ದ ಮತ್ತಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್​ ತಗುಲಿದೆ. ಗಾಯಗೊಂಡಿರುವ ಮೂವರೂ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಯನ್ನು ಕೇರಳದ ಮಲ್ಲಪುರಂ ಜಿಲ್ಲೆಯ 23 ವರ್ಷದ ಯುವಕ ಎಂದು ಗುರುತಿಸಲಾಗಿದೆ. ಈತನನ್ನು ಇತರ ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಮತ್ತು ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಯನ್ನು ಖಂಡಿಸಿ ಟ್ವೀಟ್​ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, “ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸರ್ಕಾರಿ ಪಿಯು ಕಾಲೇಜಿನ ಹೆಣ್ಣು ಮಕ್ಕಳ ಮೇಲೆ ಆಸಿಡ್ ಎರಚಿರುವ ಘಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವುದಕ್ಕೆ ಕೈಗನ್ನಡಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು