3:02 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಪ್ರೇಮಿ ಜತೆ ಸೇರಲು ತಾಳಿ ಕಟ್ಟಿದ ಪತಿಗೇ ಮುಹೂರ್ತ ಇಟ್ಟ ಪತ್ನಿ: ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಕೆರೆಗೆ ಎಸೆದು ಕೊಲೆ

14/08/2023, 10:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರೇಮಿ ಜೊತೆ ಸೇರಲು ತಾಳಿ ಕಟ್ಟಿ ಸಪ್ತಪದಿ ತುಳಿದ ಪತಿಯನ್ನೇ ಪತ್ನಿಯೊಬ್ಬಳು ಪ್ರಿಯಕರನ ಸಹಾಯದಿಂದ ಕೊಲೆ ಮಾಡಿದ ಅಮಾನವೀಯ ಘಟನೆಗೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ಸಾಕ್ಷಿಯಾಗಿದೆ.
ನವೀನ್ (28) ಎಂಬಾತ ಪತ್ನಿಯ ಕಣ್ಣಾಮುಚ್ಚಾಲೆ ಆಟಕ್ಕೆ ಬಲಿಯಾದ ನತದೃಷ್ಟ ಪತಿ. ಪಾವನ ಅಂತ ಹೆಸರಿಟ್ಕೊಂಡ ಗೃಹಿಣಿ ಈ ಪಾಪದ ಕೆಲಸ ಮಾಡಿದ್ದಾಳೆ. ಈಕೆ ಪ್ರಿಯಕರ ಸಂಜಯ್ ಎಂಬಾತನ ಜತೆ ಸೇರಿಕೊಂಡು ಪತಿಗೆ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಜ್ಞಾನ ತಪ್ಪಿಸಿದ್ದಳು. ನಂತರ ಪ್ರಜ್ಞೆ ತಪ್ಪಿದ ಪತಿಯನ್ನು ಪ್ರೇಮಿ ಜೊತೆ ಬೈಕಲ್ಲಿ ತಂದು ಕೆರೆಗೆ ಎಸೆದು ಹೋಗಿದ್ದಳು. ಆಗಸ್ಟ್ 6ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿತ್ತು. ಇದು ಸಹಜ ಸಾವಲ್ಲ, ಕೊಲೆ ಎಂದು ನವೀನ್ ಪೋಷಕರು ದೂರು ನೀಡಿದ್ದಾರೆ.


ಪ್ರೇಮಿ ಸಂಜಯ್ ಜೊತೆ ಇರಲು ಅಡ್ಡಗಾಲಾಗುತ್ತಿದ್ದ ಪತಿ ನವೀನ್ ಅವರನ್ನು ಪ್ರೇಮಿ ಸಂಜಯ್ ಜೊತೆ ಸೇರಿ ಪತಿ ನವೀನ್ ಗೆ ಮಂಗಳ ಹಾಡಿದ್ದಳು. ತನಿಖೆಯ ವೇಳೆ ಎಲ್ಲಾ ಸತ್ಯವನ್ನು ಪಾವನ-ಸಂಜಯ್ ಬಾಯಿ ಬಿಟ್ಟಿದ್ದಾರೆ. ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು