10:06 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಪ್ರೇಮಿ ಜತೆ ಸೇರಲು ತಾಳಿ ಕಟ್ಟಿದ ಪತಿಗೇ ಮುಹೂರ್ತ ಇಟ್ಟ ಪತ್ನಿ: ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಕೆರೆಗೆ ಎಸೆದು ಕೊಲೆ

14/08/2023, 10:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರೇಮಿ ಜೊತೆ ಸೇರಲು ತಾಳಿ ಕಟ್ಟಿ ಸಪ್ತಪದಿ ತುಳಿದ ಪತಿಯನ್ನೇ ಪತ್ನಿಯೊಬ್ಬಳು ಪ್ರಿಯಕರನ ಸಹಾಯದಿಂದ ಕೊಲೆ ಮಾಡಿದ ಅಮಾನವೀಯ ಘಟನೆಗೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ಸಾಕ್ಷಿಯಾಗಿದೆ.
ನವೀನ್ (28) ಎಂಬಾತ ಪತ್ನಿಯ ಕಣ್ಣಾಮುಚ್ಚಾಲೆ ಆಟಕ್ಕೆ ಬಲಿಯಾದ ನತದೃಷ್ಟ ಪತಿ. ಪಾವನ ಅಂತ ಹೆಸರಿಟ್ಕೊಂಡ ಗೃಹಿಣಿ ಈ ಪಾಪದ ಕೆಲಸ ಮಾಡಿದ್ದಾಳೆ. ಈಕೆ ಪ್ರಿಯಕರ ಸಂಜಯ್ ಎಂಬಾತನ ಜತೆ ಸೇರಿಕೊಂಡು ಪತಿಗೆ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಜ್ಞಾನ ತಪ್ಪಿಸಿದ್ದಳು. ನಂತರ ಪ್ರಜ್ಞೆ ತಪ್ಪಿದ ಪತಿಯನ್ನು ಪ್ರೇಮಿ ಜೊತೆ ಬೈಕಲ್ಲಿ ತಂದು ಕೆರೆಗೆ ಎಸೆದು ಹೋಗಿದ್ದಳು. ಆಗಸ್ಟ್ 6ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿತ್ತು. ಇದು ಸಹಜ ಸಾವಲ್ಲ, ಕೊಲೆ ಎಂದು ನವೀನ್ ಪೋಷಕರು ದೂರು ನೀಡಿದ್ದಾರೆ.


ಪ್ರೇಮಿ ಸಂಜಯ್ ಜೊತೆ ಇರಲು ಅಡ್ಡಗಾಲಾಗುತ್ತಿದ್ದ ಪತಿ ನವೀನ್ ಅವರನ್ನು ಪ್ರೇಮಿ ಸಂಜಯ್ ಜೊತೆ ಸೇರಿ ಪತಿ ನವೀನ್ ಗೆ ಮಂಗಳ ಹಾಡಿದ್ದಳು. ತನಿಖೆಯ ವೇಳೆ ಎಲ್ಲಾ ಸತ್ಯವನ್ನು ಪಾವನ-ಸಂಜಯ್ ಬಾಯಿ ಬಿಟ್ಟಿದ್ದಾರೆ. ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು