6:02 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ರಾಜ್ಯದ ಗ್ರಾಪಂ ಚುನಾವಣೆಗೆ’ ಭರ್ಜರಿ ಸಿದ್ಧತೆ: ವಾರ್ಡ್ ಸಂಖ್ಯೆ 94 ಸಾವಿರಕ್ಕೆ ಏರಿಕೆ

24/04/2026, 09:34

ಬೆಂಗಳೂರು(reporterkarnataka.com): ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದ ತಳಹದಿಯಾಗಿರುವ ಗ್ರಾಮ ಪಂಚಾಯತಿಗಳ ಚುನಾವಣೆಗೆ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ರಾಜ್ಯದ 31 ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತಿ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಬಾರಿ ಒಟ್ಟು ಸದಸ್ಯರ ಸಂಖ್ಯೆ 94 ಸಾವಿರಕ್ಕೆ ಏರಿಕೆಯಾಗಲಿದೆ. 2020ರ ಚುನಾವಣೆಯಲ್ಲಿ ರಾಜ್ಯದ 5,728 ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 91,339 ಸದಸ್ಯ ಸ್ಥಾನಗಳಿದ್ದವು. ಈ ಬಾರಿ 5,700ಕ್ಕೂ ಹೆಚ್ಚು ಪಂಚಾಯತಿಗಳಿಗೆ ಒಟ್ಟು 94,081 ಸದಸ್ಯ ಸ್ಥಾನಗಳನ್ನು ಪ್ರಸ್ತಾವಿಸಲಾಗಿದೆ.
ಹೆಚ್ಚು ಸ್ಥಾನ ಹೊಂದಿರುವ ಜಿಲ್ಲೆಗಳು: ಬೆಳಗಾವಿ ಜಿಲ್ಲೆಯು ಅತಿ ಹೆಚ್ಚು ಅಂದರೆ 8,413 ಸದಸ್ಯ ಸ್ಥಾನಗಳನ್ನು ಹೊಂದಿದ್ದು, ಅಗ್ರಸ್ಥಾನದಲ್ಲಿದೆ. ತುಮಕೂರು (5,228) ಮತ್ತು ಕಲಬುರಗಿ (4,429) ನಂತರದ ಸ್ಥಾನಗಳಲ್ಲಿವೆ.
ಕಡಿಮೆ ಸ್ಥಾನಗಳು: ಕೊಡಗು ಜಿಲ್ಲೆಯಲ್ಲಿ 102 ಪಂಚಾಯತಿಗಳಿಂದ 1,200 ಸದಸ್ಯರಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ ಕೇವಲ 85 ಗ್ರಾಮ ಪಂಚಾಯತಿಗಳಿದ್ದು 2,047 ಸದಸ್ಯರಿದ್ದಾರೆ.

*ಕ್ಷೇತ್ರ ಮರುವಿಂಗಡಣೆ ಮತ್ತು ಆಕ್ಷೇಪಣೆ*
ಕರ್ನಾಟಕ ಪಂಚಾಯತ್ ರಾಜ್ ಕ್ಷೇತ್ರ ಮರುವಿಂಗಡಣಾ ಆಯೋಗವು ಈ ಕರಡು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಶುಕ್ರವಾರದವರೆಗೆ ಕಾಲಾವಕಾಶ ನೀಡಲಾಗಿದೆ. ಅಂತಿಮ ಅಧಿಸೂಚನೆ ಹೊರಬಿದ್ದ ನಂತರ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಮಹಿಳೆಯರಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ನಡೆಯಲಿದೆ.

*ರಾಜಕೀಯ ಪಕ್ಷಗಳ ಸಿದ್ಧತೆ*
ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ರಂಗದಲ್ಲೂ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಪಕ್ಷವು ಗ್ರಾಮ ಮಟ್ಟದಲ್ಲಿ ತಮಗೆ ಇರುವ ಬೆಂಬಲದ ಕುರಿತು ಸಮೀಕ್ಷೆ ನಡೆಸುತ್ತಿದ್ದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕೂಡ ತಮ್ಮ ಕಾರ್ಯಕರ್ತರ ಮೂಲಕ ಹಳ್ಳಿಗಳಲ್ಲಿ ಸಿದ್ಧತೆ ಆರಂಭಿಸಿವೆ. ಪ್ರಸ್ತುತ ಪಂಚಾಯತಿಗಳಲ್ಲಿ ಆಡಳಿತಾಧಿಕಾರಿಗಳ ಆಡಳಿತವಿದ್ದು, ಶೀಘ್ರದಲ್ಲೇ ಚುನಾವಣೆ ನಡೆಸುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿಬರುತ್ತಿದೆ. ಈ ಕ್ಷೇತ್ರ ಮರುವಿಂಗಡಣೆಯ ಪ್ರಕ್ರಿಯೆಯು ಮುಕ್ತಾಯಗೊಂಡ ಕೂಡಲೇ ರಾಜ್ಯ ಚುನಾವಣಾ ಆಯೋಗವು ಮತದಾನದ ದಿನಾಂಕಗಳನ್ನು ಘೋಷಿಸುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು