1:45 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ: 18 ಮೆಟ್ಟಿಲೇರಿದ ದೇಶದ ಪ್ರಥಮ ಪ್ರಜೆ

22/10/2025, 20:41

ಪತ್ತನಂತಿಟ್ಟ(reporterkarnataka.com): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಳಿಗ್ಗೆ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆಗೆ ಭೇಟಿ ನೀಡಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು.
ಪಂಪಾಗೆ ಆಗಮಿಸಿದ ರಾಷ್ಟ್ರಪತಿ ಅವರು ಪವಿತ್ರ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡಿದರು. ನಂತರ ಪಂಬಾ ಗಣಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿ ಸಂಪ್ರದಾಯದಂತೆ ಇರುಮುಡಿ ಕಟ್ಟುವ ಪ್ರಕ್ರಿಯೆ ಕೈಗೊಂಡರು. ನಂತರ ವಿಶೇಷ ಭದ್ರತಾ ವಾಹನದ ಮೂಲಕ ಅಯ್ಯಪ್ಪ ಸ್ವಾಮಿ ಸನ್ನಿಧಾನ ತಲುಪಿದರು.
ರಾಷ್ಟ್ರಪತಿ ಮುರ್ಮು ಅವರನ್ನು ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ತಂತ್ರಿಗಳು ಪೂರ್ಣಕುಂಭದೊಂದಿಗೆ ಬರಮಾಡಿಕೊಂಡರು.
ದೇಶದ ಪ್ರಥಮ ಪ್ರಜೆ ಶಬರಿಮಲೆಯ ಪವಿತ್ರ ಮೆಟ್ಟಿಲುಗಳನ್ನು ಹತ್ತುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದರು.
ಇದಕ್ಕೂ ಮುನ್ನ, ರಾಷ್ಟ್ರಪತಿಗಳ ಬೆಂಗಾವಲು ಪಡೆ ಬೆಳಿಗ್ಗೆ 7:30ಕ್ಕೆ ತಿರುವನಂತಪುರದ ರಾಜಭವನದಿಂದ ಪತ್ತನಂತಿಟ್ಟದ ಪ್ರಮದಂನಲ್ಲಿರುವ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದ ಮೈದಾನಕ್ಕೆ ಆಗಮಿಸಿತ್ತು. ಅಲ್ಲಿಂದ ರಾಷ್ಟ್ರಪತಿ ಅವರನ್ನು ಹೆಲಿಕಾಪ್ಟರ್‌ನಲ್ಲಿ ಬೆಟ್ಟದ ದೇವಾಲಯಕ್ಕೆ ಕರೆದೊಯ್ಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು