5:22 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

President of India | ಗಡಿಭಾಗದ ಸಮಸ್ಯೆ ಪರಿಹಾರಕ್ಕೆ ವಿಶೇಷಾಧಿಕಾರಿ ನೇಮಿಸಿ: ರಾಷ್ಟ್ರಪತಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿಳಿಮಲೆ ಆಗ್ರಹ

27/02/2025, 20:56

ಬೆಂಗಳೂರು(reporterkarnataka.com): ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮನಸ್ಸು ಮಾಡಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತಂತೆ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಗೆ ಪತ್ರ ಬರೆದಿರುವ ಅವರು, ಸಂವಿಧಾನದ 350 (ಬಿ) ಅನುಚ್ಛೇದದಲ್ಲಿ ಗಡಿ ಪ್ರದೇಶಗಳಲ್ಲಿ ವಾಸಿಸುವ ಭಾಷಾ ಅಲ್ಪಸಂಖ್ಯಾತರು ಬಹುಸಂಖ್ಯಾತರೊಂದಿಗೆ ಸಾಮರಸ್ಯದ ಜೀವನವನ್ನು ನಡೆಸುವಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಲಾಗಿದ್ದು, ಅದರಂತೆ ಕೇಂದ್ರ ಸರ್ಕಾರವು ವಿಶೇಷಾಧಿಕಾರಿಯನ್ನು ನೇಮಿಸಬೇಕಿದೆ ಎಂದಿದ್ದಾರೆ. ಹೀಗೆ ನೇಮಿಸಲಾಗುವ ವಿಶೇಷಾಧಿಕಾರಿ, ಗಡಿ ಭಾಗಗಳ ಭಾಷಾ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಕೂಲಂಕಷವಾಗಿ ಅಧ್ಯಯನ ನಡೆಸಬೇಕು. ಸಮಸ್ಯೆವಾರು ವಿವರಗಳನ್ನು ಸಿದ್ಧಪಡಿಸಿ, ರಾಷ್ಟ್ರಪತಿಗಳಿಗೆ ಸಲ್ಲಿಸಬೇಕು. ರಾಷ್ಟ್ರಪತಿಗಳು ಅದನ್ನು ಸಂಸತ್ತಿನ ಉಭಯ ಸದನಗಳ ಮುಂದೆ ಮಂಡಿಸಲು ನಿರ್ದೇಶಿಸಬಹುದಾಗಿದ್ದು, ಕೇಂದ್ರ ಸರ್ಕಾರವು ವರದಿಯ ಆಧಾರದಲ್ಲಿ ಉಭಯ ರಾಜ್ಯಗಳ ಗಡಿ ಹಿಂಸಾಚಾರಗಳನ್ನು ಹತ್ತಿಕ್ಕುವಲ್ಲಿ ಕ್ರಮ ವಹಿಸಬೇಕಾಗುತ್ತದೆ ಎಂದು ಡಾ.ಬಿಳಿಮಲೆ ಹೇಳಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಗಲಭೆ ಈ ಪತ್ರ ಬರೆಯಲು ಪ್ರೇರೇಪಿಸಿದೆ ಎಂದು ಹೇಳಿರುವ ಡಾ.ಬಿಳಿಮಲೆ, ಈ ಸಮಸ್ಯೆ ಮೇಲ್ನೋಟಕ್ಕೆ ಕಾಣುವುದಕ್ಕಿಂತಲೂ ತೀವ್ರವಾಗಿದ್ದು, ಎರಡೂ ರಾಜ್ಯಗಳ ಆಡಳಿತ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿರುವುದಷ್ಟೇ ಅಲ್ಲ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ, ಅಗಾಧ ಹಿಂಸಾಚಾರ ವೇದನೆ ತರುವ ವಿಷಯವಾಗಿದೆ. ಈ ಅರ್ಥಹೀನ ಗಲಭೆಗಳಿಗೆ ಇತಿಶ್ರೀ ಹಾಡಲು ಕೇಂದ್ರ ಸರ್ಕಾರವು ಕೂಡಲೇ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು