3:02 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

President of India | ಗಡಿಭಾಗದ ಸಮಸ್ಯೆ ಪರಿಹಾರಕ್ಕೆ ವಿಶೇಷಾಧಿಕಾರಿ ನೇಮಿಸಿ: ರಾಷ್ಟ್ರಪತಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿಳಿಮಲೆ ಆಗ್ರಹ

27/02/2025, 20:56

ಬೆಂಗಳೂರು(reporterkarnataka.com): ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮನಸ್ಸು ಮಾಡಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತಂತೆ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಗೆ ಪತ್ರ ಬರೆದಿರುವ ಅವರು, ಸಂವಿಧಾನದ 350 (ಬಿ) ಅನುಚ್ಛೇದದಲ್ಲಿ ಗಡಿ ಪ್ರದೇಶಗಳಲ್ಲಿ ವಾಸಿಸುವ ಭಾಷಾ ಅಲ್ಪಸಂಖ್ಯಾತರು ಬಹುಸಂಖ್ಯಾತರೊಂದಿಗೆ ಸಾಮರಸ್ಯದ ಜೀವನವನ್ನು ನಡೆಸುವಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿಯನ್ನು ಸ್ಪಷ್ಟವಾಗಿ ನಿಗದಿಪಡಿಸಲಾಗಿದ್ದು, ಅದರಂತೆ ಕೇಂದ್ರ ಸರ್ಕಾರವು ವಿಶೇಷಾಧಿಕಾರಿಯನ್ನು ನೇಮಿಸಬೇಕಿದೆ ಎಂದಿದ್ದಾರೆ. ಹೀಗೆ ನೇಮಿಸಲಾಗುವ ವಿಶೇಷಾಧಿಕಾರಿ, ಗಡಿ ಭಾಗಗಳ ಭಾಷಾ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಕೂಲಂಕಷವಾಗಿ ಅಧ್ಯಯನ ನಡೆಸಬೇಕು. ಸಮಸ್ಯೆವಾರು ವಿವರಗಳನ್ನು ಸಿದ್ಧಪಡಿಸಿ, ರಾಷ್ಟ್ರಪತಿಗಳಿಗೆ ಸಲ್ಲಿಸಬೇಕು. ರಾಷ್ಟ್ರಪತಿಗಳು ಅದನ್ನು ಸಂಸತ್ತಿನ ಉಭಯ ಸದನಗಳ ಮುಂದೆ ಮಂಡಿಸಲು ನಿರ್ದೇಶಿಸಬಹುದಾಗಿದ್ದು, ಕೇಂದ್ರ ಸರ್ಕಾರವು ವರದಿಯ ಆಧಾರದಲ್ಲಿ ಉಭಯ ರಾಜ್ಯಗಳ ಗಡಿ ಹಿಂಸಾಚಾರಗಳನ್ನು ಹತ್ತಿಕ್ಕುವಲ್ಲಿ ಕ್ರಮ ವಹಿಸಬೇಕಾಗುತ್ತದೆ ಎಂದು ಡಾ.ಬಿಳಿಮಲೆ ಹೇಳಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಗಲಭೆ ಈ ಪತ್ರ ಬರೆಯಲು ಪ್ರೇರೇಪಿಸಿದೆ ಎಂದು ಹೇಳಿರುವ ಡಾ.ಬಿಳಿಮಲೆ, ಈ ಸಮಸ್ಯೆ ಮೇಲ್ನೋಟಕ್ಕೆ ಕಾಣುವುದಕ್ಕಿಂತಲೂ ತೀವ್ರವಾಗಿದ್ದು, ಎರಡೂ ರಾಜ್ಯಗಳ ಆಡಳಿತ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿರುವುದಷ್ಟೇ ಅಲ್ಲ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ, ಅಗಾಧ ಹಿಂಸಾಚಾರ ವೇದನೆ ತರುವ ವಿಷಯವಾಗಿದೆ. ಈ ಅರ್ಥಹೀನ ಗಲಭೆಗಳಿಗೆ ಇತಿಶ್ರೀ ಹಾಡಲು ಕೇಂದ್ರ ಸರ್ಕಾರವು ಕೂಡಲೇ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು