6:33 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಪ್ರೀತಿ ನಿರಾಕರಿಸಿದ ಯುವತಿಯ ಮೇಲೆ ಅತ್ಯಾಚಾರ ; ಆರೋಪಿಯ ಬಂಧನ

10/12/2021, 17:23

ಮಂಗಳೂರು:(reporterkarnataka.com): ಪ್ರೀತಿ ನಿರಾಕರಿಸಿದಳೆಂದು ತನ್ನ ಸಹಪಾಠಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬಜೆ ಪೊಲೀಸರು ಬಂಧಿಸಿದ್ದಾರೆ.

ಅಬೂಬಕರ್ ಸಿದ್ದಿಕ್ (21) ಬಂಧಿತ ಆರೋಪಿ. 2019ರಲ್ಲಿ ನಡೆದಿದ್ದ ಕಾಲೇಜು ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜೊತೆಯಾಗಿ ನಿಂತು ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ ಅಬೂಬಕರ್ ಸಿದ್ದಿಕ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಒಂದು ವೇಳೆ ಪ್ರೀತಿಗೆ ನಿರಾಕರಿಸಿದಲ್ಲಿ ಇಬ್ಬರೂ ಜೊತೆಯಾಗಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸುತ್ತಿದ್ದ ಎನ್ನಲಾಗಿದೆ.

ಅಬೂಬಕರ್ ಸಿದ್ದಿಕ್ ಎಷ್ಟೇ ಪೀಡಿಸಿ, ಬೆದರಿಸಿದರೂ ಯುವತಿ ಪ್ರೀತಿಗೆ ಒಪ್ಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿ.8 ರಂದು ಯುವತಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿ ಬಂದ ಆರೋಪಿ, ಆಕೆಯ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರು ದಾಖಲಿಸಿಕೊಂಡಿರುವ ಬಜಪೆ ಪೋಲಿಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು