11:41 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪ್ರೀತಿ ನಿರಾಕರಿಸಿದ ಯುವತಿಯ ಮೇಲೆ ಅತ್ಯಾಚಾರ ; ಆರೋಪಿಯ ಬಂಧನ

10/12/2021, 17:23

ಮಂಗಳೂರು:(reporterkarnataka.com): ಪ್ರೀತಿ ನಿರಾಕರಿಸಿದಳೆಂದು ತನ್ನ ಸಹಪಾಠಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬಜೆ ಪೊಲೀಸರು ಬಂಧಿಸಿದ್ದಾರೆ.

ಅಬೂಬಕರ್ ಸಿದ್ದಿಕ್ (21) ಬಂಧಿತ ಆರೋಪಿ. 2019ರಲ್ಲಿ ನಡೆದಿದ್ದ ಕಾಲೇಜು ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜೊತೆಯಾಗಿ ನಿಂತು ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ ಅಬೂಬಕರ್ ಸಿದ್ದಿಕ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಒಂದು ವೇಳೆ ಪ್ರೀತಿಗೆ ನಿರಾಕರಿಸಿದಲ್ಲಿ ಇಬ್ಬರೂ ಜೊತೆಯಾಗಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸುತ್ತಿದ್ದ ಎನ್ನಲಾಗಿದೆ.

ಅಬೂಬಕರ್ ಸಿದ್ದಿಕ್ ಎಷ್ಟೇ ಪೀಡಿಸಿ, ಬೆದರಿಸಿದರೂ ಯುವತಿ ಪ್ರೀತಿಗೆ ಒಪ್ಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿ.8 ರಂದು ಯುವತಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿ ಬಂದ ಆರೋಪಿ, ಆಕೆಯ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರು ದಾಖಲಿಸಿಕೊಂಡಿರುವ ಬಜಪೆ ಪೋಲಿಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು