10:54 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಮಧು ಬಂಗಾರಪ್ಪ

20/03/2025, 14:38

ಬೆಂಗಳೂರು (reporterkarnataka.com):ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ರಾಮೋಜಿಗೌಡರು ನಿಯಮ 330 ರಡಿ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, ಸೇವಾ ಹಿರಿತನದ ಸೌಲಭ್ಯ ಕುರಿತಂತೆ ನೀಡಿದ ಸೂಚನಾ ಪತ್ರಕ್ಕೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಪರಿಶೀಲಿಸಿ ವರದಿ ನೀಡಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಎರಡು ಬಾರಿ ಸಭೆ ನಡೆದಿದ್ದು, ಬೇಡಿಕೆಗಳ ಸಾಧಕ -ಬಾಧಕ ಹಾಗೂ ನಿಯಮಗಳಲ್ಲಿನ ಅವಕಾಶಗಳ ಕುರಿತು ಪರಿಶೀಲಿಸಲಾಗುತ್ತಿದೆ. ಸಮಿತಿ ವರದಿ ಬಂದ ನಂತರ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು‌ ಎಂದು‌ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು