2:17 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಮಧು ಬಂಗಾರಪ್ಪ

20/03/2025, 14:38

ಬೆಂಗಳೂರು (reporterkarnataka.com):ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ರಾಮೋಜಿಗೌಡರು ನಿಯಮ 330 ರಡಿ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, ಸೇವಾ ಹಿರಿತನದ ಸೌಲಭ್ಯ ಕುರಿತಂತೆ ನೀಡಿದ ಸೂಚನಾ ಪತ್ರಕ್ಕೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಪರಿಶೀಲಿಸಿ ವರದಿ ನೀಡಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಎರಡು ಬಾರಿ ಸಭೆ ನಡೆದಿದ್ದು, ಬೇಡಿಕೆಗಳ ಸಾಧಕ -ಬಾಧಕ ಹಾಗೂ ನಿಯಮಗಳಲ್ಲಿನ ಅವಕಾಶಗಳ ಕುರಿತು ಪರಿಶೀಲಿಸಲಾಗುತ್ತಿದೆ. ಸಮಿತಿ ವರದಿ ಬಂದ ನಂತರ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು‌ ಎಂದು‌ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು