7:07 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪ್ರೀತಿಸಿ ವಂಚನೆ: ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣು; ಆರೋಪಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಪೊಲೀಸರು ಹಿಂದೇಟು?

15/01/2023, 11:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರೇಮಿಸಿದ ಯುವಕ ವಂಚಿಸಿದ ಹಿನ್ನೆಲೆಯಲ್ಲಿ ಮುಗ್ಧ ಬಾಲಕಿ ಸಾವಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.
ಸಾವನ್ನಪ್ಪಿದ ತರುಣಿಯನ್ನು ದೀಪ್ತಿ(17) ಎಂದು ಗುರುತಿಸಲಾಗಿದೆ. ಹಿತೇಶ್ (25) ಎಂಬ ತರುಣ ಈಕೆಯನ್ನು ಪ್ರೀತಿಸುತ್ತಿದ್ದ. ನಂತರ ಆತನ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಪಿ ಹಿತೇಶ್ ಬಿಜೆಪಿ ಕಾರ್ಯಕರ್ತ ಎಂದು ತಿಳಿದು ಬಂದಿದೆ.

ನೊಂದ ಬಾಲಕಿ ಜ.10ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿದ್ದಳು. ತೀವ್ರ ಅಸ್ವಸ್ಥಗೊಂಡ ಆಕೆಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ದೀಪ್ತಿ ಸಾವನ್ನಪ್ಪಿದ್ದಾಳೆ. ಸಾಯುವ ಕೊನೆಯ ಕ್ಷಣದಲ್ಲಿ ಡೆತ್ ನೋಟ್ ಬಾಲಕಿ ಬರೆದಿದ್ದಾಳೆ.
ಆರೋಪಿ ಹಿತೇಶ್ ವಿರುದ್ಧ ದೂರು ದಾಖಲಿಸದೇ ಕುದುರೆ ಮುಖ ಪೊಲೀಸರು ಸತಾಯಿಸಿದ್ದರು. ನಂತರ ಪೋಷಕರ ದೂರು ಸ್ವೀಕರಿಸದ ಕುದುರೆಮುಖ ಪೊಲೀಸರಿಗೆ ಎಸ್ಪಿ ತರಾಟೆಗೆ ತೆಗೆದುಕೊಂಡಿದ್ದರು.
ಎಸ್.ಪಿ ಸೂಚನೆ ಬಳಿಕ ಆರೋಪಿ ಹಿತೇಶ್ ವಿರುದ್ಧ ದೂರು ಸ್ವೀಕಾರ ಮಾಡಲಾಗಿದೆ.ಆದರೆ ಈವರೆಗೆ ಆರೋಪಿಯನ್ನು ಕುದುರೆಮುಖ ಪೊಲೀಸರು ಬಂಧಿಸಿಲ್ಲ. ಪೊಲೀಸರ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಆರೋಪಿ ಬಿಜೆಪಿ ಕಾರ್ಯಕರ್ತ ಹಿತೇಶ್ ವಿರುದ್ಧ ಕ್ರಮಕ್ಕೆ ಹಿಂದೇಟು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು