ಇತ್ತೀಚಿನ ಸುದ್ದಿ
ಆಗುಂಬೆ ಸಮೀಪ ಖಾಸಗಿ ಬಸ್ – ಕಾರಿನ ಅಪಘಾತ: ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು
16/05/2026, 19:42
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ತೀರ್ಥಹಳ್ಳಿ ಸಮೀಪದ ಕೈಮರದ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ಪಲ್ಟಿ ಹೊಡೆದಿದೆ.


ನಿದ್ರೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬಸ್ಸಿನಲ್ಲಿ ಇದ್ದವರು ಹಾಗೂ ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಳ್ಳಾರಿ ಮೂಲದ ಬಸ್ಸು ಹಾಗೂ ಶಿವಮೊಗ್ಗ ಮೂಲದ ಕಾರು ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.













