2:07 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ ಪಾರು

23/09/2025, 12:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ವಿರಾಜಪೇಟೆ ಗೋಣಿಕೊಪ್ಪಲು ಮುಖ್ಯ ರಸ್ತೆಯ ಬಿಟ್ಟಂಗಾಲದ, ಬಿ ಶೆಟ್ಟಿಗೇರಿಗೆ ಹೋಗುವ ಮಾರ್ಗದ ಮುಂಭಾಗದ ತಿರುವಿನಲ್ಲಿ ಇಂದು ಬೆಳಗ್ಗೆ ವಿರಾಜಪೇಟೆ ಯಿಂದ ಬರುತ್ತಿದ್ದ ಅಣ್ಣಪ್ಪಸ್ವಾಮಿ ಬಸ್ಸಿಗೆ, ಮೈಸೂರಿನಿಂದ ಕೋಳಿ ತುಂಬಿಕೊಂಡು ಬರುತ್ತಿದ್ದ ಪಿಕ್ ಅಪ್ ಜೀಪ್ ಡಿಕ್ಕಿಯಾಗಿ, ಜೀಪ್ ಒಂದು ಬದಿ ರಸ್ತೆಯ ಪಕ್ಕಕ್ಕೆ ವಾಲಿ, ಸಂಪೂರ್ಣ ಜಖಂಗೊಂಡಿದೆ.

ಜೀಪಿನಲ್ಲಿದ್ದ ಚಾಲಕ ಹಾಗೂ ಮತೊಬ್ಬನಿಗೆ ಯಾವುದೇ ರೀತಿಯ ಗಾಯಗಳು ಉಂಟಾಗಿಲ್ಲ. ಜೀಪ್ ನ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎಂದು ಪ್ರತಿಕ್ಷ ದರ್ಶಿಗಳು ಹೇಳಿದ್ದಾರೆ.
ಮೈಸೂರಿನಿಂದ ಕೋಳಿ ತುಂಬಿಕೊಂಡು, ಕೊಡಗು ಹಾಗೂ ಕೇರಳಕ್ಕೆ ಈ ಮಾರ್ಗದಲ್ಲಿ ನೂರಾರು ಪಿಕಪ್ ಜೀಪುಗಳು ಪ್ರತಿನಿತ್ಯ ಸಂಚರಿಸುತ್ತಿದ್ದು, ಬಹಳಷ್ಟು ವಾಹನಗಳು ಅತಿ ವೇಗದಿಂದ ಹಾಗೂ ಅಜಾಗೂರಕ ಚಾಲನೆಯಿಂದ ಹಲವು ಅಪಘಾತಗಳು ಆಗಾಗ ಸಂಭವಿಸುತ್ತದೆ. ಪೊಲೀಸ್ ಇಲಾಖೆ ಕೋಳಿ ತುಂಬಿದ ವಾಹನಗಳ ವೇಗದ ಚಾಲನೆಗೆ ಮಿತಿಗೊಳಿಸಬೇಕಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು