1:35 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ ಪಾರು

23/09/2025, 12:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ವಿರಾಜಪೇಟೆ ಗೋಣಿಕೊಪ್ಪಲು ಮುಖ್ಯ ರಸ್ತೆಯ ಬಿಟ್ಟಂಗಾಲದ, ಬಿ ಶೆಟ್ಟಿಗೇರಿಗೆ ಹೋಗುವ ಮಾರ್ಗದ ಮುಂಭಾಗದ ತಿರುವಿನಲ್ಲಿ ಇಂದು ಬೆಳಗ್ಗೆ ವಿರಾಜಪೇಟೆ ಯಿಂದ ಬರುತ್ತಿದ್ದ ಅಣ್ಣಪ್ಪಸ್ವಾಮಿ ಬಸ್ಸಿಗೆ, ಮೈಸೂರಿನಿಂದ ಕೋಳಿ ತುಂಬಿಕೊಂಡು ಬರುತ್ತಿದ್ದ ಪಿಕ್ ಅಪ್ ಜೀಪ್ ಡಿಕ್ಕಿಯಾಗಿ, ಜೀಪ್ ಒಂದು ಬದಿ ರಸ್ತೆಯ ಪಕ್ಕಕ್ಕೆ ವಾಲಿ, ಸಂಪೂರ್ಣ ಜಖಂಗೊಂಡಿದೆ.

ಜೀಪಿನಲ್ಲಿದ್ದ ಚಾಲಕ ಹಾಗೂ ಮತೊಬ್ಬನಿಗೆ ಯಾವುದೇ ರೀತಿಯ ಗಾಯಗಳು ಉಂಟಾಗಿಲ್ಲ. ಜೀಪ್ ನ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎಂದು ಪ್ರತಿಕ್ಷ ದರ್ಶಿಗಳು ಹೇಳಿದ್ದಾರೆ.
ಮೈಸೂರಿನಿಂದ ಕೋಳಿ ತುಂಬಿಕೊಂಡು, ಕೊಡಗು ಹಾಗೂ ಕೇರಳಕ್ಕೆ ಈ ಮಾರ್ಗದಲ್ಲಿ ನೂರಾರು ಪಿಕಪ್ ಜೀಪುಗಳು ಪ್ರತಿನಿತ್ಯ ಸಂಚರಿಸುತ್ತಿದ್ದು, ಬಹಳಷ್ಟು ವಾಹನಗಳು ಅತಿ ವೇಗದಿಂದ ಹಾಗೂ ಅಜಾಗೂರಕ ಚಾಲನೆಯಿಂದ ಹಲವು ಅಪಘಾತಗಳು ಆಗಾಗ ಸಂಭವಿಸುತ್ತದೆ. ಪೊಲೀಸ್ ಇಲಾಖೆ ಕೋಳಿ ತುಂಬಿದ ವಾಹನಗಳ ವೇಗದ ಚಾಲನೆಗೆ ಮಿತಿಗೊಳಿಸಬೇಕಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು