5:58 AM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ ಪಾರು

23/09/2025, 12:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ವಿರಾಜಪೇಟೆ ಗೋಣಿಕೊಪ್ಪಲು ಮುಖ್ಯ ರಸ್ತೆಯ ಬಿಟ್ಟಂಗಾಲದ, ಬಿ ಶೆಟ್ಟಿಗೇರಿಗೆ ಹೋಗುವ ಮಾರ್ಗದ ಮುಂಭಾಗದ ತಿರುವಿನಲ್ಲಿ ಇಂದು ಬೆಳಗ್ಗೆ ವಿರಾಜಪೇಟೆ ಯಿಂದ ಬರುತ್ತಿದ್ದ ಅಣ್ಣಪ್ಪಸ್ವಾಮಿ ಬಸ್ಸಿಗೆ, ಮೈಸೂರಿನಿಂದ ಕೋಳಿ ತುಂಬಿಕೊಂಡು ಬರುತ್ತಿದ್ದ ಪಿಕ್ ಅಪ್ ಜೀಪ್ ಡಿಕ್ಕಿಯಾಗಿ, ಜೀಪ್ ಒಂದು ಬದಿ ರಸ್ತೆಯ ಪಕ್ಕಕ್ಕೆ ವಾಲಿ, ಸಂಪೂರ್ಣ ಜಖಂಗೊಂಡಿದೆ.

ಜೀಪಿನಲ್ಲಿದ್ದ ಚಾಲಕ ಹಾಗೂ ಮತೊಬ್ಬನಿಗೆ ಯಾವುದೇ ರೀತಿಯ ಗಾಯಗಳು ಉಂಟಾಗಿಲ್ಲ. ಜೀಪ್ ನ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎಂದು ಪ್ರತಿಕ್ಷ ದರ್ಶಿಗಳು ಹೇಳಿದ್ದಾರೆ.
ಮೈಸೂರಿನಿಂದ ಕೋಳಿ ತುಂಬಿಕೊಂಡು, ಕೊಡಗು ಹಾಗೂ ಕೇರಳಕ್ಕೆ ಈ ಮಾರ್ಗದಲ್ಲಿ ನೂರಾರು ಪಿಕಪ್ ಜೀಪುಗಳು ಪ್ರತಿನಿತ್ಯ ಸಂಚರಿಸುತ್ತಿದ್ದು, ಬಹಳಷ್ಟು ವಾಹನಗಳು ಅತಿ ವೇಗದಿಂದ ಹಾಗೂ ಅಜಾಗೂರಕ ಚಾಲನೆಯಿಂದ ಹಲವು ಅಪಘಾತಗಳು ಆಗಾಗ ಸಂಭವಿಸುತ್ತದೆ. ಪೊಲೀಸ್ ಇಲಾಖೆ ಕೋಳಿ ತುಂಬಿದ ವಾಹನಗಳ ವೇಗದ ಚಾಲನೆಗೆ ಮಿತಿಗೊಳಿಸಬೇಕಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು