11:56 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ ಪಾರು

23/09/2025, 12:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ವಿರಾಜಪೇಟೆ ಗೋಣಿಕೊಪ್ಪಲು ಮುಖ್ಯ ರಸ್ತೆಯ ಬಿಟ್ಟಂಗಾಲದ, ಬಿ ಶೆಟ್ಟಿಗೇರಿಗೆ ಹೋಗುವ ಮಾರ್ಗದ ಮುಂಭಾಗದ ತಿರುವಿನಲ್ಲಿ ಇಂದು ಬೆಳಗ್ಗೆ ವಿರಾಜಪೇಟೆ ಯಿಂದ ಬರುತ್ತಿದ್ದ ಅಣ್ಣಪ್ಪಸ್ವಾಮಿ ಬಸ್ಸಿಗೆ, ಮೈಸೂರಿನಿಂದ ಕೋಳಿ ತುಂಬಿಕೊಂಡು ಬರುತ್ತಿದ್ದ ಪಿಕ್ ಅಪ್ ಜೀಪ್ ಡಿಕ್ಕಿಯಾಗಿ, ಜೀಪ್ ಒಂದು ಬದಿ ರಸ್ತೆಯ ಪಕ್ಕಕ್ಕೆ ವಾಲಿ, ಸಂಪೂರ್ಣ ಜಖಂಗೊಂಡಿದೆ.

ಜೀಪಿನಲ್ಲಿದ್ದ ಚಾಲಕ ಹಾಗೂ ಮತೊಬ್ಬನಿಗೆ ಯಾವುದೇ ರೀತಿಯ ಗಾಯಗಳು ಉಂಟಾಗಿಲ್ಲ. ಜೀಪ್ ನ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎಂದು ಪ್ರತಿಕ್ಷ ದರ್ಶಿಗಳು ಹೇಳಿದ್ದಾರೆ.
ಮೈಸೂರಿನಿಂದ ಕೋಳಿ ತುಂಬಿಕೊಂಡು, ಕೊಡಗು ಹಾಗೂ ಕೇರಳಕ್ಕೆ ಈ ಮಾರ್ಗದಲ್ಲಿ ನೂರಾರು ಪಿಕಪ್ ಜೀಪುಗಳು ಪ್ರತಿನಿತ್ಯ ಸಂಚರಿಸುತ್ತಿದ್ದು, ಬಹಳಷ್ಟು ವಾಹನಗಳು ಅತಿ ವೇಗದಿಂದ ಹಾಗೂ ಅಜಾಗೂರಕ ಚಾಲನೆಯಿಂದ ಹಲವು ಅಪಘಾತಗಳು ಆಗಾಗ ಸಂಭವಿಸುತ್ತದೆ. ಪೊಲೀಸ್ ಇಲಾಖೆ ಕೋಳಿ ತುಂಬಿದ ವಾಹನಗಳ ವೇಗದ ಚಾಲನೆಗೆ ಮಿತಿಗೊಳಿಸಬೇಕಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು