1:59 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ ಪಾರು

23/09/2025, 12:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ವಿರಾಜಪೇಟೆ ಗೋಣಿಕೊಪ್ಪಲು ಮುಖ್ಯ ರಸ್ತೆಯ ಬಿಟ್ಟಂಗಾಲದ, ಬಿ ಶೆಟ್ಟಿಗೇರಿಗೆ ಹೋಗುವ ಮಾರ್ಗದ ಮುಂಭಾಗದ ತಿರುವಿನಲ್ಲಿ ಇಂದು ಬೆಳಗ್ಗೆ ವಿರಾಜಪೇಟೆ ಯಿಂದ ಬರುತ್ತಿದ್ದ ಅಣ್ಣಪ್ಪಸ್ವಾಮಿ ಬಸ್ಸಿಗೆ, ಮೈಸೂರಿನಿಂದ ಕೋಳಿ ತುಂಬಿಕೊಂಡು ಬರುತ್ತಿದ್ದ ಪಿಕ್ ಅಪ್ ಜೀಪ್ ಡಿಕ್ಕಿಯಾಗಿ, ಜೀಪ್ ಒಂದು ಬದಿ ರಸ್ತೆಯ ಪಕ್ಕಕ್ಕೆ ವಾಲಿ, ಸಂಪೂರ್ಣ ಜಖಂಗೊಂಡಿದೆ.

ಜೀಪಿನಲ್ಲಿದ್ದ ಚಾಲಕ ಹಾಗೂ ಮತೊಬ್ಬನಿಗೆ ಯಾವುದೇ ರೀತಿಯ ಗಾಯಗಳು ಉಂಟಾಗಿಲ್ಲ. ಜೀಪ್ ನ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎಂದು ಪ್ರತಿಕ್ಷ ದರ್ಶಿಗಳು ಹೇಳಿದ್ದಾರೆ.
ಮೈಸೂರಿನಿಂದ ಕೋಳಿ ತುಂಬಿಕೊಂಡು, ಕೊಡಗು ಹಾಗೂ ಕೇರಳಕ್ಕೆ ಈ ಮಾರ್ಗದಲ್ಲಿ ನೂರಾರು ಪಿಕಪ್ ಜೀಪುಗಳು ಪ್ರತಿನಿತ್ಯ ಸಂಚರಿಸುತ್ತಿದ್ದು, ಬಹಳಷ್ಟು ವಾಹನಗಳು ಅತಿ ವೇಗದಿಂದ ಹಾಗೂ ಅಜಾಗೂರಕ ಚಾಲನೆಯಿಂದ ಹಲವು ಅಪಘಾತಗಳು ಆಗಾಗ ಸಂಭವಿಸುತ್ತದೆ. ಪೊಲೀಸ್ ಇಲಾಖೆ ಕೋಳಿ ತುಂಬಿದ ವಾಹನಗಳ ವೇಗದ ಚಾಲನೆಗೆ ಮಿತಿಗೊಳಿಸಬೇಕಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು