12:18 PM Friday17 - April 2026
ಬ್ರೇಕಿಂಗ್ ನ್ಯೂಸ್
ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ…

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು