11:23 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು