7:07 PM Monday13 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು