3:08 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು