6:02 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು