5:53 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು