2:11 PM Saturday27 - July 2024
ಬ್ರೇಕಿಂಗ್ ನ್ಯೂಸ್
ಧಾರಾಕಾರ ಮಳೆ: ತೀರ್ಥಹಳ್ಳಿ ರಥಬೀದಿಯಲ್ಲಿ ಮನೆ ಗೋಡೆ ಕುಸಿತ ಬಿರುಸಿನ ಗಾಳಿ ಮಳೆ: ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ ಇಂದು ರಜೆ ಅವ್ಯಾಹತ ಬಿರುಸಿನ ಗಾಳಿ ಮಳೆ: ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಶಾಲಾ- ಕಾಲೇಜುಗಳಿಗೆ ರಜೆ ವಾಹನಗಳಲ್ಲಿ ಪ್ರಖರ ಬೆಳಕಿನ ಬಲ್ಬ್ ಅಳವಡಿಕೆ: ಒಟ್ಟು 1170 ಪ್ರಕರಣ ದಾಖಲು; 5.86… ನಾಗಬೇನಾಳ: ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ ಇಲಾಖೆಗಳ ನಡುವೆ ಸಮನ್ವಯತೆ ಕೊರತೆ: ಮರೋಳಿಯ ಡೇಂಜರ್ ಟ್ರೀ ತೆರವಿಗೆ ಮೀನಮೇಷ! ಸ್ಪೆಲ್ ಬೀ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆ: ಮೇರಿಹಿಲ್ ಮೌಂಟ್ ಕಾರ್ ಮೆಲ್ ಸೆಂಟ್ರಲ್… 3 ಘಾಟ್ ಗಳಲ್ಲಿ ಸಂಚಾರ ನಿಷೇಧ: ಜಿಲ್ಲಾಧಿಕಾರಿಗಳ ಸಮನ್ವಯತೆ ಕೊರತೆ ಬಗ್ಗೆ ಪಿಡಬ್ಲ್ಯೂಡಿ… ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ಭಾರೀ ಹೆಚ್ಚಳ: ತಗ್ಗು ಪ್ರದೇಶ ಮುಳುಗಡೆ;… ಪ್ರವಾಹ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಂಜುಂಡೇಶ್ವರನಿಗೆ ಜಲದಿಗ್ಬಂಧನ

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು