5:17 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಖಾಸಗಿ ಫೋಟೋ ವೈರಲ್ ಮಾಡ್ತೀನಿ ಎಂದು ಬೆದರಿಸಿದ ಪ್ರಿಯತಮನ ಭೀಕರ ಕೊಲೆ: ಪ್ರಿಯತಮೆ, ಸಹೋದರ ಬಂಧನ

11/06/2024, 17:15

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಆಕೆಯ ಸಹೋದರ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಟೌನ್ ನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಮೂಲದ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್ ಮೃತ ದುರ್ದೈವಿ.
ಈತನ ತಲೆ ಮೇಲೆ ಸೈಜು ಕಲ್ಲು ಎತ್ತಿ ಹಾಕಿ ಕೊಲೆಗೈದ ಪ್ರಿಯತಮೆ ಪ್ರೇಮಾ ಹಾಗೂ ಈಕೆಯ ಸಹೋದರ ಶಿವು ಇದೀಗ ಪೊಲೀಸರ ಅತಿಥಿಗಳಗಿದ್ದಾರೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ಪ್ರೇಮಾ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರ ನಿವಾಸಿಯನ್ನ ಮದುವೆ ಆಗಿದ್ದಳು. ಒಂದು ತಿಂಗಳ ಹಿಂದೆ ಪ್ರೇಮಾ ಪತಿ ಆತ್ಮಹತ್ಯೆ ಮಾಡಿಕೊಂಡು ತೀರಿಕೊಂಡಿದ್ದರು.
ಪ್ರೇಮಾ ಪತಿಗೆ ರಾಜೇಶ್ ಸ್ನೇಹಿತನಾಗಿದ್ದು ಆಗಾಗ ಮನೆಗೆ ಬಂದು ಪರಿಚಯ ಮಾಡಿಕೊಂಡಿದ್ದ. ಪರಿಚಯದಿಂದ ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು.
ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ ಇಬ್ಬರು ಇದ್ದ ಖಾಸಗಿ ಫೋಟೋ ಹಾಗೂ ಆಡಿಯೋಗಳನ್ನ ವೈರಲ್ ಮಾಡುವುದಾಗಿ ಪ್ರೇಮಾಗೆ ರಾಜೇಶ್ ಬೆದರಿಕೆ ಹಾಕಿದ್ದಾನೆ.
ಇದೇ ವಿಚಾರದಲ್ಲಿ ಮಾತನಾಡಬೇಕೆಂದು ಪ್ರೇಮಾ ನಿನ್ನೆ ರಾತ್ರಿ ರಾಜೇಶ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.


ಈ ವೇಳೆ ಪ್ರೇಮಾ ಹಾಗೂ ಸಹೋದರ ಶಿವು ಇಬ್ಬರೂ ಸೇರಿ ರಾಜೇಶ್ ವಿರುದ್ದ ತಿರುಗಿಬಿದ್ದಿದ್ದಾರೆ. ಇದರಿಂದ ತನಗೆ ಅಪಾಯ ಎಂದು ತಿಳಿದ ರಾಜೇಶ್ ಇವರಿಂದ ತಪ್ಪಿಸಿಕೊಂಡು ಓಡಿದ್ದಾನೆ. ನಂಜನಗೂಡು ಪಟ್ಟಣದ ಆರ್.ಪಿ.ರಸ್ತೆಯ 8 ನೇ ಕ್ರಾಸ್ ಬಳಿ ಅಡ್ಡಹಾಕಿದ ಪ್ರೇಮಾ ಹಾಗೂ ಶಿವು ಜಗಳವಾಡಿ ರಾಜೇಶ್ ತಲೆ ಮೇಲೆ ಕಲ್ಲು ಚೆಪ್ಪಡಿಯನ್ನ ಎತ್ತಿ ಹಾಕಿ ಭೀಕರವಾಗಿ ಕೊಂದಿದ್ದಾರೆ.
ಅಷ್ಟರಲ್ಲಿ ವಿಷಯ ತಿಳಿದು ನಂಜನಗೂಡು ಟೌನ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮ ಹಾಗೂ ಶಿವು ಇಬ್ಬರನ್ನೂ ಬಂಧಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಡಿವೈಎಸ್ಪಿ ರಘು ಮತ್ತು ನಂಜನಗೂಡಿನ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು