11:26 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪ್ರಿಯಕರನ ಜತೆ ಅಸ್ಸಾಂನಿಂದ ಬಂದ ಅಪ್ರಾಪ್ತ ವಯಸ್ಸಿನ ಗೃಹಿಣಿ ಮಂಗಳೂರಿನಲ್ಲಿ ಹೆಣವಾದಳು!: ಇದು ಆತ್ಮಹತ್ಯೆಯೇ? ಕೊಲೆಯೇ?

21/01/2022, 22:09

ಮಂಗಳೂರು(reporterkarnataka.com): ಪ್ರೀತಿಸಿ ದೂರದ ಅಸ್ಸಾಂನಿಂದ ಪ್ರಿಯಕರನ ಜತೆ ಓಡಿ ಬಂದಿದ್ದ ಅಪ್ರಾಪ್ತ ವಯಸ್ಸಿನ ಗೃಹಿಣಿಯೊಬ್ಬಳು ನಗರದ ಕುದ್ರೋಳಿಯ ಬಾಡಿಗೆ ಮನೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದಾಳೆ.

ಅಸ್ಸಾಂ ಮೂಲದ ಸುಫಿಯಾ(17) ಎಂಬಾಕೆ ಸೈದುಲ್ಲಾ ಎಂಬಾತನ ಪ್ರೀತಿಸಿ ಮದುವೆಯಾಗಿದ್ದಳು. ಅವರು ನಗರದ ಕುದ್ರೋಳಿ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. 

ಇಂದು ಅಪ್ರಾಪ್ತ ಗೃಹಿಣಿಯ ಮೃತದೇಹ ಕುತ್ತಿಗೆಗೆ ಶಾಲು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯಲ್ಲಿದ್ದ ಪತಿ ಸೈದುಲ್ಲಾ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತಿಯೇ ಕುತ್ತಿಗೆಗೆ ಶಾಲು ಬಿಗಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಳಗ್ಗೆ 6 ಗಂಟೆಗೆ ಸೈದುಲ್ಲಾ ನೆರೆ ಮನೆಗೆ ಬಂದು, ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಸುಫಿಯಾ ಮತ್ತು ಸೈದುಲ್ಲಾ ಪ್ರೀತಿಸಿ ಮನೆ ಬಿಟ್ಟು ಓಡಿ ಬಂದು ಮಂಗಳೂರಿನ ಕುದ್ರೋಳಿಯಲ್ಲಿ ನೆಲೆಸಿದ್ದರು. ಸೈದುಲ್ಲಾ ಪೈಟಿಂಗ್ ಕೆಲಸ ಮಾಡುತ್ತಿದ್ದ. ಆತನೊಂದಿಗೆ ಇತರ ಇಬ್ಬರು ಸ್ನೇಹಿತರು ಕೂಡ ಇದ್ದರು. ಅವರು ಕೂಡ ಇದೆ ಮನೆಯಲ್ಲಿ ನೆಲೆಸಿದ್ದರು. ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. 

ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು