9:01 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಪ್ರಿಯಕರನ ಜತೆ ಅಸ್ಸಾಂನಿಂದ ಬಂದ ಅಪ್ರಾಪ್ತ ವಯಸ್ಸಿನ ಗೃಹಿಣಿ ಮಂಗಳೂರಿನಲ್ಲಿ ಹೆಣವಾದಳು!: ಇದು ಆತ್ಮಹತ್ಯೆಯೇ? ಕೊಲೆಯೇ?

21/01/2022, 22:09

ಮಂಗಳೂರು(reporterkarnataka.com): ಪ್ರೀತಿಸಿ ದೂರದ ಅಸ್ಸಾಂನಿಂದ ಪ್ರಿಯಕರನ ಜತೆ ಓಡಿ ಬಂದಿದ್ದ ಅಪ್ರಾಪ್ತ ವಯಸ್ಸಿನ ಗೃಹಿಣಿಯೊಬ್ಬಳು ನಗರದ ಕುದ್ರೋಳಿಯ ಬಾಡಿಗೆ ಮನೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದಾಳೆ.

ಅಸ್ಸಾಂ ಮೂಲದ ಸುಫಿಯಾ(17) ಎಂಬಾಕೆ ಸೈದುಲ್ಲಾ ಎಂಬಾತನ ಪ್ರೀತಿಸಿ ಮದುವೆಯಾಗಿದ್ದಳು. ಅವರು ನಗರದ ಕುದ್ರೋಳಿ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. 

ಇಂದು ಅಪ್ರಾಪ್ತ ಗೃಹಿಣಿಯ ಮೃತದೇಹ ಕುತ್ತಿಗೆಗೆ ಶಾಲು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯಲ್ಲಿದ್ದ ಪತಿ ಸೈದುಲ್ಲಾ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತಿಯೇ ಕುತ್ತಿಗೆಗೆ ಶಾಲು ಬಿಗಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಳಗ್ಗೆ 6 ಗಂಟೆಗೆ ಸೈದುಲ್ಲಾ ನೆರೆ ಮನೆಗೆ ಬಂದು, ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಸುಫಿಯಾ ಮತ್ತು ಸೈದುಲ್ಲಾ ಪ್ರೀತಿಸಿ ಮನೆ ಬಿಟ್ಟು ಓಡಿ ಬಂದು ಮಂಗಳೂರಿನ ಕುದ್ರೋಳಿಯಲ್ಲಿ ನೆಲೆಸಿದ್ದರು. ಸೈದುಲ್ಲಾ ಪೈಟಿಂಗ್ ಕೆಲಸ ಮಾಡುತ್ತಿದ್ದ. ಆತನೊಂದಿಗೆ ಇತರ ಇಬ್ಬರು ಸ್ನೇಹಿತರು ಕೂಡ ಇದ್ದರು. ಅವರು ಕೂಡ ಇದೆ ಮನೆಯಲ್ಲಿ ನೆಲೆಸಿದ್ದರು. ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. 

ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು