2:39 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪ್ರಿಯಕರನ ಜತೆ ಅಸ್ಸಾಂನಿಂದ ಬಂದ ಅಪ್ರಾಪ್ತ ವಯಸ್ಸಿನ ಗೃಹಿಣಿ ಮಂಗಳೂರಿನಲ್ಲಿ ಹೆಣವಾದಳು!: ಇದು ಆತ್ಮಹತ್ಯೆಯೇ? ಕೊಲೆಯೇ?

21/01/2022, 22:09

ಮಂಗಳೂರು(reporterkarnataka.com): ಪ್ರೀತಿಸಿ ದೂರದ ಅಸ್ಸಾಂನಿಂದ ಪ್ರಿಯಕರನ ಜತೆ ಓಡಿ ಬಂದಿದ್ದ ಅಪ್ರಾಪ್ತ ವಯಸ್ಸಿನ ಗೃಹಿಣಿಯೊಬ್ಬಳು ನಗರದ ಕುದ್ರೋಳಿಯ ಬಾಡಿಗೆ ಮನೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದಾಳೆ.

ಅಸ್ಸಾಂ ಮೂಲದ ಸುಫಿಯಾ(17) ಎಂಬಾಕೆ ಸೈದುಲ್ಲಾ ಎಂಬಾತನ ಪ್ರೀತಿಸಿ ಮದುವೆಯಾಗಿದ್ದಳು. ಅವರು ನಗರದ ಕುದ್ರೋಳಿ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. 

ಇಂದು ಅಪ್ರಾಪ್ತ ಗೃಹಿಣಿಯ ಮೃತದೇಹ ಕುತ್ತಿಗೆಗೆ ಶಾಲು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯಲ್ಲಿದ್ದ ಪತಿ ಸೈದುಲ್ಲಾ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತಿಯೇ ಕುತ್ತಿಗೆಗೆ ಶಾಲು ಬಿಗಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಳಗ್ಗೆ 6 ಗಂಟೆಗೆ ಸೈದುಲ್ಲಾ ನೆರೆ ಮನೆಗೆ ಬಂದು, ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಸುಫಿಯಾ ಮತ್ತು ಸೈದುಲ್ಲಾ ಪ್ರೀತಿಸಿ ಮನೆ ಬಿಟ್ಟು ಓಡಿ ಬಂದು ಮಂಗಳೂರಿನ ಕುದ್ರೋಳಿಯಲ್ಲಿ ನೆಲೆಸಿದ್ದರು. ಸೈದುಲ್ಲಾ ಪೈಟಿಂಗ್ ಕೆಲಸ ಮಾಡುತ್ತಿದ್ದ. ಆತನೊಂದಿಗೆ ಇತರ ಇಬ್ಬರು ಸ್ನೇಹಿತರು ಕೂಡ ಇದ್ದರು. ಅವರು ಕೂಡ ಇದೆ ಮನೆಯಲ್ಲಿ ನೆಲೆಸಿದ್ದರು. ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. 

ಬಂದರು ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು